ಕೂಡಿಗೆ, ಜೂ. ೧೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮೇಲೆ ಗ್ರಾ.ಪಂ. ಮಾಜಿ ಸದಸ್ಯ ಮತ್ತು ಆತನ ಸಂಗಡಿಗರು ಹಲ್ಲೆ ಮಾಡಿರುವ ಸಂಬAಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾರಂಗಿಯಲ್ಲಿ ಚರಂಡಿ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು ಆ ಕಾಮಗಾರಿಯ ವೀಕ್ಷಣೆಗೆ ಭಾಸ್ಕರ್ ನಾಯಕ್ ಮತ್ತು ಸಂಬAಧಿಸಿದ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಮಾಜಿ ಸದಸ್ಯ ಶ್ರೀನಿವಾಸ್ ಮತ್ತು ಆತನ ಸಂಗಡಿಗ ರವಿ ಎಂಬವರು ಚಾಕು ವಿನಿಂದ ಭಾಸ್ಕರ್ ನಾಯಕ್ ಎಡಗೈಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಗಾಯಗೊಂಡ ಭಾಸ್ಕರ್ ನಾಯಕ್ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಭಾಸ್ಕರ್ ನಾಯಕ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶ್ರೀನಿವಾಸ್ ಮತ್ತು ರವಿ ಪ್ರತಿದೂರು ದಾಖಲಿಸಿದ್ದಾರೆ. ಎರಡು ಕಡೆಯ ದೂರಿನ ಪ್ರಕರಣ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಠಾಣಾಧಿಕಾರಿ ಶಿವಶಂಕರ್ ಹಾರಂಗಿಗೆ ತೆರಳಿ ಪರಿಶೀಲನೆ ನಡೆಸಿದರು.