ಕುಶಾಲನಗರ, ಮಾ. ೧೭: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರೂಪಿಸಿರುವ ಜಿಲ್ಲೆಯ ಮೊದಲ ಯೋಜನೆಯಾಗಿರುವ ‘ಜೀವ ವೈವಿದ್ಯ ಔಷಧ ಉದ್ಯಾನ’ಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಹತ್ವವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತಿಳಿಸುವ ನಿಟ್ಟಿನಲ್ಲಿ ೨.೫ ಹೆಕ್ಟೇರ್ ಪ್ರದೇಶದಲ್ಲಿ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಿಸಲು ಮಂಡಳಿ ಮುಂದಾಗಿದೆ.
ಹಾರAಗಿ ವೃಕ್ಷೋದ್ಯಾನವನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಫಲಕ ಅನಾವರಣಗೊಳಿಸಿ, ಸಾಂಕೇತಿಕವಾಗಿ ಔಷಧಿಯ ಗಿಡಗಳನ್ನು ನೆಡುವ ಮೂಲಕ ಉದ್ದೇಶಿತ ಯೋಜನೆಗೆ ಚಾಲನೆ ನೀಡಿದ ಶಾಸಕ ಅಪ್ಪಚ್ಚು ರಂಜನ್ ಅವರು ಬಳಿಕ ಮಾತನಾಡಿ, ಔಷಧ ಉದ್ಯಾನ ನಿರ್ಮಾಣಕ್ಕೆ ಹಾರಂಗಿ ಉತ್ತಮ ಜಾಗ. ಔಷಧಿ ಸಸ್ಯಗಳನ್ನು ಉಳಿಸುವ ಕಾರ್ಯ ನಿರಂತರವಾಗಿ ಆಗಬೇಕು. ನಮ್ಮ ಪರಿಸರ ಉಳಿದರೆ ಮಾತ್ರ ಜೀವರಾಶಿಗಳು ಬದುಕಲು ಸಾಧ್ಯ. ಭಾರತೀಯರು ಪ್ರಕೃತಿ ಆರಾಧಕರು. ಈ ಮೊದಲೆಲ್ಲ ವಿದೇಶಿಗರು ನಮ್ಮ ಸಂಸ್ಕೃತಿಯನ್ನು ಲೇವಡಿ ಮಾಡಿಕೊಳ್ಳುತ್ತಿದ್ದರು. ಆದರೆ ಇಂದು ಪ್ರಕೃತಿ ಆರಾಧನೆಯ ಮಹತ್ವ ವಿದೇಶಿಗರಿಗೆ ಅರಿವಾಗಿದೆ. ಕೊಡಗಿನಲ್ಲಿ ಪ್ರತಿ ಊರಿನಲ್ಲೂ ದೇವರ ಕಾಡುಗಳು ಇವೆ. ಹಿಂದಿನಿAದಲೂ ಆ ಕಾಡುಗಳನ್ನು ಸಂರಕ್ಷಿಸಿಕೊAಡು ಬರಲಾಗುತ್ತಿದೆ. ಈ ಕಾಡುಗಳಲ್ಲೂ ಅಪಾರ ಔಷಧೀಯ ಗಿಡಗಳು, ಜೀವ ವೈವಿಧ್ಯಗಳಿವೆ ಎಂದರು.
ಮುಂದುವರೆದ ರಾಷ್ಟçಗಳು ಆಯುರ್ವೇದ ಔಷಧಗಳಿಗೆ ಹೆಚ್ಚಿನ ಒತ್ತು ನೀಡುತ್ತಿವೆ. ಭಾರತದಿಂದ ಹೇರಳ ಪ್ರಮಾಣದಲ್ಲಿ ಆಯುರ್ವೇದ ಔಷಧಿ ವಿದೇಶಕ್ಕೆ ರಫ್ತಾಗುತ್ತಿವೆ. ಆಯುರ್ವೇದಿಂದ ಯಾವುದೇ ಅಡ್ಡ ಪರಿಣಾಮಗಳಿರುವುದಿಲ್ಲ. ಹೀಗಾಗಿ ನಮ್ಮ ಪಾರಂಪರಿಕ ಔಷಧಗಳತ್ತ ನಾವು ಒಲವು ಹೊಂದಬೇಕು. ಔಷಧಿ ಗಿಡಮೂಲಿಕೆಗಳ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಿಕೊಡುವ ಕಾರ್ಯವನ್ನು ಅರಿತವರು ಮಾಡಬೇಕು. ಪಶ್ಚಿಮಘಟ್ಟ ಪ್ರದೇಶದ ನದಿಮೂಲಗಳ ಸಂರಕ್ಷಣೆಗೂ ಎಲ್ಲರೂ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕೊಡಗಿನಲ್ಲಿ ಔಷಧೀಯ ಸಸ್ಯಗಳ ಉದ್ಯಾನ ಮಾಡಬೇಕೆಂದು ಈ ಹಿಂದೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು ಆಶಯ ವ್ಯಕ್ತಪಡಿಸಿದ್ದರು. ಈ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಮಂಡಳಿ ಸಭೆಯಲ್ಲಿ ಅನುಮೋದನೆ ಪಡೆದು, ಈಗ ಕಾರ್ಯರೂಪಕ್ಕೆ ತರಲಾಗುತ್ತಿದೆ. ನಮ್ಮಲ್ಲಿರುವ ಔಷಧ ಸಸ್ಯಗಳು ಹಾಗೂ ಅವುಗಳ ಮಹತ್ವದ ಬಗ್ಗೆ ನಮಗೆ ತಿಳಿದಿಲ್ಲ. ಔಷಧೀಯ ಸಸ್ಯ ಸಂಪತ್ತಿನ ಬಗ್ಗೆ ಜನರಿಗೆ ತಿಳಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದ ಅವರು, ಹಾರಂಗಿ ಜಲಾಶಯ, ಆನೆ ಶಿಬಿರ, ವೃಕ್ಷೋದ್ಯಾನಕ್ಕೆ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಾರೆ. ಮುಂದಿನ ದಿನದಲ್ಲಿ ಔಷಧ ಉದ್ಯಾನ ಆದ ಬಳಿಕ ಪ್ರವಾಸಿಗರು ಅದರ ಲಾಭವನ್ನೂ ಪಡೆಯಬಹುದು. ಉದ್ಯಾನ ನಿರ್ಮಾಣದ ಬಳಿಕ ಅದರ ನಿರ್ವಹಣೆ ನಿಟ್ಟಿನಲ್ಲಿ ಅರಣ್ಯ ಇಲಾಖೆ, ಸ್ಥಳೀಯ
(ಮೊದಲ ಪುಟದಿಂದ) ಪಂಚಾಯಿತಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಗಮನ ಸೆಳೆದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಔಷಧಿಯ ಉದ್ಯಾನ ನಿರ್ಮಾಣಕ್ಕೆ ಯೋಜನೆ ಜಾರಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಜೀವ ವೈವಿಧ್ಯ ಮಂಡಳಿ ಮೂಲಕ ಕೊಡಗು ಕಿತ್ತಳೆ ಬೆಳೆಯ ಪುನಶ್ಚೇತನ ಮಾಡುವಲ್ಲಿ ಚಿಂತನೆ ಹರಿಸಲಾಗಿದೆ. ಕೊಡಗು ಕಿತ್ತಳೆಯ ಸ್ಥಳೀಯ ಮೂಲ ತಳಿ ಉತ್ಪಾದಿಸಿ ಸಂಶೋಧನೆ ಮಾಡುವ ಮೂಲಕ ಕಿತ್ತಳೆ ಬೆಳೆ ಬೆಳೆಯುವಲ್ಲಿ ಮಂಡಳಿ ಮೂಲಕ ಎಲ್ಲಾ ರೀತಿಯ ಸಹಾಯ ಹಸ್ತ ನೀಡಲಾಗುವುದು ಈ ಸಂಬAಧ ಈಗಾಗಲೇ ಮಂಡಳಿ ಸಭೆಯಲ್ಲಿ ಚರ್ಚೆ ನಡೆದಿದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ, ಪ್ರಪಂಚದಲ್ಲಿ ಒಟ್ಟು ೧೨ ಜೀವ ವೈವಿಧ್ಯದ ಹಾಟ್ ಸ್ಪಾಟ್ಗಳಿವೆ. ಅವುಗಳಲ್ಲಿ ಎರಡು ಭಾರತದಲ್ಲಿದ್ದು, ಪಶ್ಚಿಮ ಘಟ್ಟ ಪ್ರದೇಶ ಅವುಗಳಲ್ಲಿ ಒಂದಾಗಿದೆ. ಹಲವು ಬಗೆಯ ಔಷಧೀಯ ಸಸ್ಯಗಳು ಪಶ್ಚಿಮ ಘಟ್ಟ ಪ್ರದೇಶದಲ್ಲಿದೆ. ಪಶ್ಚಿಮ ಘಟ್ಟ ಮತ್ತು ಹಿಮಾಲಯ ಇಲ್ಲದಿದ್ದರೆ ಭಾರತ ಬರಡು ಪ್ರದೇಶವಾಗಿರುತ್ತಿತ್ತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜೀವ ವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಎಸ್ ಆರೆಕಲ್, ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ ನಾಯಕ, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಪ್ರಮುಖರಾದ ಬಿ.ಬಿ ಭಾರತೀಶ್ ಆರ್.ಕೆ. ಚಂದ್ರ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ವನ್ಯಜೀವಿ ವಿಭಾಗದ ಶಿವರಾಮ್ ಬಾಬು, ಶರಣಬಸಪ್ಪ ಸ್ವಾಮಿ, ವೀರಾಜಪೇಟೆಯ ಎಂ.ಜೆ ಗೋವರ್ಧನಸಿಂಗ್, ಸಹಾಯಕ ಅರಣ್ಯ ಸಂರಕ್ಷಣೆ ಅಧಿಕಾರಿ ಎ.ಎ. ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಂ, ಸ್ಥಳೀಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು. ಎ.ಟಿ. ಪೂವಯ್ಯ ಸ್ವಾಗತಿಸಿದರು. ಗೋಪಾಲ್ ವಂದಿಸಿ, ಕೆ.ಆರ್. ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.