ಸುಂಟಿಕೊಪ್ಪ,, ಮಾ. ೧೯: ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎಂ. ಮಧುರ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಇಲ್ಲಿನ ಆಟೋ ಚಾಲಕರ ಸಂಘದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎಂ. ಮಧುರ ಅವರು ಆಟೋರಿಕ್ಷಾ, ಕ್ಯಾಬ್ ಚಾಲಕರ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಮೆಟ್ರಿಕ್ ನಂತರ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರಕಾರದಿಂದ ಸಿಗುವ ಉಚಿತ ವಿದ್ಯಾನಿಧಿ ಯೋಜನೆಯ ಮಾಹಿತಿ ನೀಡಿದರು.

ಚಾಲಕರ ಮಕ್ಕಳಿಗೆ ಸರಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು ಚಾಲಕರು ತಮ್ಮ ಡ್ರೆöÊವಿಂಗ್ ಲೈಸನ್ಸ್ ಜೊತೆ ಆಧಾರ್ ಸಂಖ್ಯೆಯೊAದಿಗೆ ಆನ್‌ಲೈನ್ ಮುಖಾಂತರ ಸೇವಾಸಿಂದು ವೆಬ್ ಪೋರ್ಟ್ಲ್‌ನಲ್ಲಿ ಸುಂಟಿಕೊಪ್ಪ ಗ್ರಾಮಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಿದರೆ ಆಧಾರ್ ಜೋಡಿತ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಆಗುತ್ತದೆ ಎಂದು ತಿಳಿಸಿದರು.

ವಾಹನ ಚಾಲಕರು ಚಾಲನಾ ಅನುಮತಿ ಪತ್ರ ಹಾಗೂ ವಾಹನಗಳ ದಾಖಲಾತಿಗಳನ್ನು ಕಾಲಕಾಲಕ್ಕೆ ಸರಿಯಾಗಿ ನವೀಕರಿಸುವುದರೊಂದಿಗೆ ಚಾಲಕರು ಕಡ್ಡಾಯವಾಗಿ ಬ್ಯಾಡ್ಜ್ಗಳನ್ನು ಧರಿಸುವಂತೆ ಸೂಚಿಸಿದರು.

ಆಟೋ ಚಾಲಕರು ಮಾತನಾಡಿ ದೂರದ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರೋಗಿಯನ್ನು ಕೊಂಡೊಯ್ಯಲು ತೆರಳಿದರೆ ಪೊಲೀಸರು ದಂಡ ವಿಧಿಸುತ್ತಿದ್ದು ಇದಕ್ಕೆ ಅÀನುಮತಿ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಾರಿಗೆ ಅಧಿsಕಾರಿ

ಎಸ್.ಎಂ. ಮಧುರ ಅವರು ಜಿಲ್ಲಾಧಿಕಾರಿಗಳಿಗೆ ಹಾಗೂ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದಲ್ಲಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ಆಟೋ ಚಾಲಕರ ಸಂಘದ ಅಧ್ಯಕ್ಷ ಶರೀಫ್, ಕಾರ್ಯದರ್ಶಿ ರಶೀದ್ ಸಂಘದ ಪದಾಧಿಕಾರಿಗಳು ಹಾಜರಿದ್ದರು.