‘ಶಕ್ತಿ’ ವರದಿಗೆ ಸ್ಪಂದನ

ಕಣಿವೆ, ನ. ೨೧ : ಕುಶಾಲನಗರ ತಾಲೂಕಿನ ಪ್ರಮುಖ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರಕ್ಕೆ ಸಂಪರ್ಕ ಕಲ್ಪಿಸುವ ಗುಡ್ಡೆಹೊಸೂರು- ನಂಜರಾಯಪಟ್ಟಣ ಮಾರ್ಗದ ಹೆದ್ದಾರಿ ಅಲ್ಲಲ್ಲಿ ಸಂಪೂರ್ಣವಾಗಿ ಗುಂಡಿ ಬಿದ್ದು ದ್ವಿಚಕ್ರ ಹಾಗೂ ಇತರ ವಾಹನಗಳ ಸಂಚಾರಕ್ಕೆ ಅನಾನುಕೂಲವಾಗಿತ್ತು.

ಈ ಬಗ್ಗೆ ‘ಶಕ್ತಿ’ಯಲ್ಲಿ ‘‘ದುಬಾರೆ ರಸ್ತೆ : ಗುಂಡಿಗಳೇ ಎಲ್ಲಾ....ರಸ್ತೆಯೇ ಇಲ್ಲ’’ ಎಂದು ಸಚಿತ್ರ ವರದಿ ಪ್ರಕಟಿಸಿತ್ತು.

ಇದಕ್ಕೆ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಇದೀಗ ಹೆದ್ದಾರಿಯ ಗುಂಡಿಗಳಿಗೆ ಡಾಂಬರು ಹಾಕುವ ಕಾರ್ಯಕ್ಕೆ ಮುಂದಾಗಿದೆ.