ಕೂಡಿಗೆ, ಫೆ. ೧೦ : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸುವ ಸಂಬAಧ ಜಿಲ್ಲಾಧಿಕಾರಿಗಳ ಸೂಚಿಸಿದರೂ ಇದುವರೆಗೆ ಒತ್ತುವರಿ ತೆರವುಗೊಳಿಸದ ಹಿನ್ನೆಲೆಯಲ್ಲಿ ಈ ಭಾಗದ ನಿವಾಸಿಗಳು ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದರು.

ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಸೂಚಿಸುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥ ಎಂ.ಬಿ.ಹರ್ಷ ಮಾಹಿತಿ ನೀಡಿದರು. ಈ ನಡುವೆ ತಹಶೀಲ್ದಾರ್ ಪ್ರತಿಭಟನಾ ನಿರತರ ಮನವೊಲಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇರೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಈ ಸಂದರ್ಭ ಗ್ರಾಮಸ್ಥರಾದ ರಾಮೇಗೌಡ, ದಿಲೀಪ್, ಸಚಿನ್, ಕುಮಾರ್, ಮಂಜುನಾಥ್ ಮತ್ತಿತರರು ಇದ್ದರು.