ಸುAಟಿಕೊಪ್ಪ, ಫೆ. ೧೦: ಪಟ್ಟಣದಲ್ಲಿ ಜ.೨೮ರಂದು ತಡರಾತ್ರಿ ಸರಣಿ ಕಳ್ಳತನ ನಡೆಸಿದ್ದ ಆರೋಪಿ ಮಹಮದ್ ಅಶ್ರಫ್ (೩೯) ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಪಟ್ಟಣದಲ್ಲಿ ಸರಣಿ ಕಳ್ಳತನ ನಡೆಸಿ ವ್ಯಾಪಾರಸ್ಥರು ಸೇರಿದಂತೆ ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದ್ದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕ್ಷೀಪ್ರ ಕಾರ್ಯಾಚರಣೆಯ ಮೂಲಕ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾರ್ಗದರ್ಶನÀದಲ್ಲಿ ಸೋಮವಾರಪೇಟೆ ಉಪವಿಭಾಗ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ಕೆ.ರಾಜೇಶ್ ಕೋಟ್ಯಾನ್ ನೇತೃತ್ವದ ಸೂಚನೆಯ ಮೇರೆ ಪ್ರಕರಣದ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಮಳ್ಳೂರು ಗ್ರಾಮದ ನಿವಾಸಿ ಆಟೋ ಚಾಲಕ ಮಹಮದ್ ಅಶ್ರಫ್ (೩೯) ಎಂಬಾತನನ್ನು ಬಂಧಿಸಲಾಗಿದ್ದು, ನಗದು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿಯ ಬಂಧನಕ್ಕೆ ಕ್ರಮಕೈಗೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಂಟಿ ಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ಪತ್ತೆ ದಳದ ಸಬ್‌ಇನ್ಸ್ಪೆಕ್ಟರ್ ನಾಗರಾಜ್, ಮುಖ್ಯ ಪೇದೆ ಸತೀಶ್, ಪೇದೆಗಳಾದ ಜಗದೀಶ್, ಉದಯ್, ಪ್ರವೀಣ್ ಮತ್ತು ರಂಜಿತ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.