ವೀರಾಜಪೇಟೆ, ಫೆ. ೧೧: ವೀರಾಜಪೇಟೆ ಸಮೀಪದ ಬಿಳುಗುಂದ ಎಂಬಲ್ಲಿ ಬೈಕ್ ಮತ್ತು ಟಿ.ಟಿ. ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಬೆಟ್ಟದ ಕಾಡು ನಿವಾಸಿ ಬೈಕ್ ಸವಾರ ಅರುಣ್ ಎಂಬಾತ À ನೆಲ್ಲಿಹುದಿಕೇರಿಯಿಂದ ವೀರಾಜಪೇಟೆ ಕಡೆಗೆ ಬರುತ್ತಿದ್ದಾಗ ಕೇರಳದಿಂದ ಮದುವೆ ಸಮಾರಂಭಕ್ಕೆAದು ಟಿಟಿ ವಾಹನ ವೀರಾಜಪೇಟೆ ಮಾರ್ಗವಾಗಿ ಸಿದ್ದಾಪುರ ಕಡೆಗೆ ಹೋಗುತ್ತಿದ್ದಾಗ ವೀರಾಜಪೇಟೆ ಬಳಿಯ ಬಿಳುಗುಂದ ಮಾರ್ಗದಲ್ಲಿ ಘಟನೆ ನಡೆದಿದೆ. ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಪ್ರಕರಣ ದಾಖಲಿಸಿಕೊಂಡು ಘಟನೆಗೆ ಸಂಬAಧಿಸಿದ ಎರಡು ವಾಹನಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.