ಮಡಿಕೇರಿ, ಫೆ. ೧೧ : ಗೃಹ ಸಚಿವ ಡಾ. ಪರಮೇಶ್ವರ್, ಡಿಜಿ ಹಾಗೂ ಐಜಿಪಿಯವರ ಸಮ್ಮುಖದಲ್ಲಿ ಬೆಂಗಳೂರಿನ ದಾಬಸ್‌ಪೇಟೆಯಲ್ಲಿ ನಡೆದ ಮಾದಕ ದ್ರವ್ಯ ವಿನಾಶ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಡ್ರಗ್ ಡಿಸ್ಪೋಸಲ್ ಕಮಿಟಿಯಿಂದ ಒಟ್ಟು ೪೬ ಪ್ರಕರಣಗಳಲ್ಲಿ ವಶಪಡಿಸಿ ಕೊಳ್ಳಲಾಗಿದ್ದ ರೂ. ೧೬ ಲಕ್ಷ ಮೌಲ್ಯದ ೪೩ ಕೆ.ಜಿ ಗಾಂಜಾ, ಮಾದಕ ದ್ರವ್ಯವನ್ನು ನಾಶಪಡಿಸಲಾಯಿತು.

ದಕ್ಷಿಣ ವಲಯದ ಐಜಿಪಿ ಅಮಿತ್ ಸಿಂಗ್, ಹಿರಿಯ ಪೊಲೀಸ್ ಅಧಿಕಾರಿಗಳು, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಎಸ್‌ಪಿ ಸುಂದರರಾಜ್ ಹಾಜರಿದ್ದರು.