ಮಡಿಕೇರಿ, ಫೆ. ೧೪: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾ. ೧೬ರಂದು ಮಡಿಕೇರಿ, ವೀರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ತಾಲೂಕು ಕೇಂದ್ರಗಳಲ್ಲಿ ಸಿಐಟಿಯು ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಪಿ.ಆರ್. ಭರತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸಬೇಕು. ದುಡಿಯುವ ಜನರ ಮೇಲಾಗುವ ಶೋಷಣೆಯನ್ನು ತಪ್ಪಿಸಬೇಕು. ಶ್ರಮಿಕರಿಗೆ ಸಮಾನತೆಯ ಬದುಕು ಕಲ್ಪಿಸಬೇಕು. ರೈತರಿಗೆ ಘನತೆಯ ಬದುಕನ್ನು ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಯಲಿದೆ ಎಂದು ಅವರುಗಳು ಮಾಹಿತಿಯಿತ್ತರು.

ಗೋಷ್ಠಿಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಾಬು, ಸದಸ್ಯರಾದ ದಿನೇಶ್, ಜಾನಕಿ ಉಪಸ್ಥಿತರಿದ್ದರು.