ಮಡಿಕೇರಿ, ಫೆ. ೧೩: ಗೌಳಿಬೀದಿಯ ಸ್ಪಂದನಾ ಮಹಿಳಾ ಸಂಘದ ೨೦ನೇ ವಾರ್ಷಿಕೋತ್ಸವ ಸಂಘದ ಅಧ್ಯಕ್ಷೆ ಕಟ್ರತನ ಲಲಿತಾ ಅಯ್ಯಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ರೋಟರಿ ವುಡ್ಸ್ನ ಪ್ರಮೀಳಾ ಶೆಟ್ಟಿ, ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವು ದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ. ಆದ್ದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯತ್ವವನ್ನು ಪಡೆದುಕೊಂಡು ಸಕ್ರಿಯರಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಸಮಾರಂಭದಲ್ಲಿ ಸಂಘದ ಮಾಜಿ ಅಧ್ಯಕ್ಷೆ ಬೊಳ್ಳಾರ್ಪಂಡ ಲೀಲಾ ಸುಬ್ಬಯ್ಯ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಗಾಗಿ ಕಟ್ರತನ ಲಲಿತಾ ಅಯ್ಯಣ್ಣ ಇವರನ್ನು ಸನ್ಮಾನಿಸಲಾಯಿತು.

ಸಂಘದ ಸದಸ್ಯರು ಹಾಗೂ ಅವರ ಮಕ್ಕಳಿಂದ ಮತ್ತು ಗೌಳಿಬೀದಿ ಅಂಗನವಾಡಿಯ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ಹಸೀನಾ, ಕಾರ್ಯದರ್ಶಿ ವಿಜಯಲಕ್ಷಿö್ಮ, ಖಜಾಂಚಿ ಗೀತಾ ಸಂಘದ ಸದಸ್ಯರು ಮತ್ತಿತರರು ಹಾಜರಿದ್ದರು.