ಮಡಿಕೇರಿ, ಫೆ. ೧೩: ಕೊಡಗು ಜಿಲ್ಲಾ ವ್ಯಾಪ್ತಿಯ ವಿದ್ಯುತ್ ಗ್ರಾಹಕರ/ ಸಾರ್ವಜನಿಕರ ಹಿತರಕ್ಷಣಾ ದೃಷ್ಟಿಯಿಂದ ವಿದ್ಯುತ್ ಅವಘಡಗಳು ಸಂಭವಿಸದAತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ವಿದ್ಯುತ್ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ವಿದ್ಯುತ್ ಅವಘಡಗಳು/ ಅಪಘಾತಗಳನ್ನು ತಡೆಗಟ್ಟಲು ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ನಿಗಮವು ಕೈಗೊಂಡಿರುವ ಕಾರ್ಯಕ್ರಮಗಳು, ಸಾರ್ವಜನಿಕರು/ ಗ್ರಾಹಕರಿಗೆ ತಿಳುವಳಿಕೆ ಮೂಡಿಸುವುದು ಹಾಗೂ ಚಾ.ವಿ.ಸ.ನಿ.ನಿ ವತಿಯಿಂದ ಕೈಗೊಂಡಿರುವ ಇತರೆ ಜನಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ “ವಿದ್ಯುತ್ ಸೇವೆಗಳು ಹಾಗೂ ಸುರಕ್ಷತಾ ಅರಿವು” ಕಾರ್ಯಕ್ರಮವನ್ನು ಶಾಖಾಮಟ್ಟದಲ್ಲಿ ಆಯೋಜಿಸಲಾಗಿದೆ.

ತಾ. ೧೪ ರಂದು ಮಡಿಕೇರಿ ಉಪ ವಿಭಾಗ ಕಚೇರಿ ಆವರಣ ಮತ್ತು ವೀರಾಜಪೇಟೆ ಉಪ ವಿಭಾಗ ಕಚೇರಿ ಆವರಣ, ತಾ. ೧೫ ರಂದು ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣ, ತಾ. ೧೬ ರಂದು ಕುಶಾಲನಗರ ಉಪ ವಿಭಾಗ ಕಚೇರಿ ಆವರಣ ಮತ್ತು ಗೋಣಿಕೊಪ್ಪಲು ಉಪ ವಿಭಾಗಕ್ಕೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಗೆ ವಿದ್ಯುತ್ ಸೇವೆಗಳು ಹಾಗೂ ಸುರಕ್ಷತಾ ಅರಿವು ಕಾರ್ಯಕ್ರಮ ನಡೆಯಲಿದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.