ಮಡಿಕೇರಿ, ಫೆ. ೧೩: ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಕಿರುಗೂರು ಗ್ರಾಮದ ಚೆಪ್ಪುಡಿರ ಸುಜು ಕರುಂಬಯ್ಯನವರ ಗದ್ದೆಯಲ್ಲಿ ಯುಕೊ ಸಂಘಟನೆಯ ವತಿಯಿಂದ ೫ ನೇ ವರ್ಷದ ಬೇದ ಚಂಗ್ರಾAದಿಯ ಆಚರಣೆ ನಡೆಯಿತು.

ಸಾಂಪ್ರದಾಯಿಕ ಉಡುಗೆ ತೊಟ್ಟ ಮಹಿಳೆಯರು ಗದ್ದೆಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಿ, ಸಾಂಪ್ರದಾಯಿಕವಾಗಿ ಕೈ ಎಣ್ಣೆಯನ್ನು ನಿಯಮದಂತೆ ಭೂಮಿಗೆ ಸುರಿದು, ಪಕ್ಕದಲ್ಲಿ ಮರದ ಬಾಚಣಿಕೆಯನ್ನಿಟ್ಟು,-‘‘ಭೂಮಿತಾಯಿ ನೀಡ ಉಟ್ಟಿಮಂಡೆ ಕಾಂಜದ್ ತಂಪಾಡ್ - ಕುಂಬ್ಯಾತ್ ಮಳೆ ಆಯಿತ್ ಕಂದ್‌ಲೂ ಕೂಳಾಡ್’’ ಎಂದು ಹೇಳುವುದರ ಮೂಲಕ ಭೂಮಿತಾಯಿಯನ್ನು ಭಾವನಾತ್ಮಕವಾಗಿ ಸ್ಮರಿಸಲಾಯಿತು.

ನಂತರ ಸುಜು ಕರುಂಬಯ್ಯನವರ ಮನೆಯಲ್ಲಿ ಜರುಗಿದ ಸಭೆಯನ್ನುದ್ದೇಶಿಸಿ ಮಾತನಾಡಿದ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಒಂದು ಮಗುವಿನ ಸಮಗ್ರ ಬೆಳವಣಿಗೆಯ ಹಿಂದೆ ಒಬ್ಬ ತಾಯಿಯ ಪ್ರಭಾವ ಮಹತ್ವದ ಪಾತ್ರ ನಿರ್ವಹಿಸುವ ಹಾಗೆ ಒಂದು ಸಮುದಾಯದ ಸಮಗ್ರ ಬೆಳವಣಿಗೆಯಲ್ಲಿ ಭೂಮಿ ತಾಯಿಯ ಪ್ರಭಾವವೂ ಬಹುಮುಖ್ಯ ಪಾತ್ರವನ್ನು ನಿರ್ವಹಿಸುತ್ತದೆ. ಇದರ ಬಾಂಧವ್ಯದ ಸಂಖೇತವಾಗಿ ಕೊಡವರು ಬೇದ ಚಂಗ್ರಾAದಿಯನ್ನು ಆಚರಣೆ ಮಾಡುತ್ತಾರೆ ಎಂದು ಹೇಳಿದರು.

ವಿಜ್ಞಾನಕ್ಕೆ ನಿಲುಕದ ಸಂಗತಿಗಳು ಸಂಸ್ಕೃತಿ, ಸಂಪ್ರದಾಯ ಹಾಗೂ ಅಧ್ಯಾತ್ಮಿಕತೆಯಲ್ಲಿ ಅಡಕವಾಗಿವೆ. ವಿಜ್ಞಾನವು ಕೇವಲ ತರ್ಕಕ್ಕೆ ಮಾತ್ರ ಸೀಮಿತವಾದ ಜ್ಞಾನವಾಗಿದೆ. ಆದರೆ, ಆಧ್ಯಾತ್ಮ ಹಾಗೂ ಪಾರಂಪರಿಕ ಆಚರಣೆಗಳು ವಿಜ್ಞಾನವನ್ನೂ ಮೀರಿದ, ತರ್ಕಕ್ಕೂ ನಿಲುಕದ ಸತ್ಯವಾಗಿದೆ. ಆದರಿಂದಲೇ ತಲೆತಲಾಂತರಗಳ ಆಚರಣೆಗಳು ಹಾಗೂ ನಂಬಿಕೆಯ ತಳಹದಿಯಮೇಲೆ ನಮ್ಮ ಜೀವನವನ್ನು ರೂಪಿಸಿಕೊಳ್ಳುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಕಳೆದ ಐದು ವರ್ಷಗಳಿಂದ ಯುಕೊ ಸಂಘಟನೆಯು ಬೇದ ಚಂಗ್ರಾAದಿ ಆಚರಣೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಇತಿಹಾಸದಿಂದಲೇ ಯಾವುದೇ ರಾಜರಿಂದಾಗಲಿ, ರಾಜಕೀಯದಿಂದಾಗಲಿ ಕೊಡವರಿಗೆ ಅನುಕೂಲಗಳಾದ ಉದಾಹರಣೆಗಳೇ ಇಲ್ಲ. ಈಗಲೂ ಸಹ ಯಾವುದೇ ರಾಜಕೀಯ ಪಕ್ಷ ಅಥವ ಮುಖಂಡರುಗಳಿAದ ಕೊಡವರಿಗೆ ಒಳಿತಾಗುತ್ತದೆ ಎಂಬುವುದು ಕೇವಲ ಭ್ರಮೆಯಷ್ಟೆ. ಆದ್ದರಿಂದ ನಮ್ಮ ಅಸ್ತಿತ್ವವನು ಉಳಿಸಿಕೊಳ್ಳುವತ್ತ ನಾವೇ ಗಮನ ಹರಿಸುವುದರ ಮೂಲಕ ನಮ್ಮನ್ನು ನಾವು ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಕಾಪಾಡಿಕೊಳ್ಳಬೇಕೆಂದು ಅವರು ಕೊಡವರಿಗೆ ಕರೆ ನೀಡಿದರು.

ಕೊಡವರನ್ನು ಹೊರತುಪಡಿಸಿದಂತೆ ಎಲ್ಲಾ ಸಮುದಾಯಗಳ ಜನಾಂಗೀಯ ಹಾಗು ಧಾರ್ಮಿಕ ನಿರ್ಧಾರಗಳು ಆಯಾ ಜನಾಂಗೀಯ ಹಾಗೂ ಧಾರ್ಮಿಕ ಮುಖಂಡರಿAದಲೇ ಆಗುತ್ತಿದೆ. ಆದರೆ ದುರಾದೃಷ್ಟವಷಾತ್ ಕೊಡವ ಸಮುದಾಯದ ಜನಾಂಗೀಯ ಹಾಗೂ ಧಾರ್ಮಿಕ ನಿರ್ಧಾರಗಳಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಅಧಿಕವಾಗಿದೆ. ಇದುವೇ ಸಮುದಾಯಕ್ಕೆ ಮಾರಕವಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮದ ಮೊದಲಿಗೆ ತಪ್ಪಡಕ ಕಟ್ಟಿ ಪ್ರಾರ್ಥಿಸಲಾಯಿತು. ಚೆಪ್ಪುಡಿರ ಸುಜು ಕರುಂಬಯ್ಯ ಸ್ವಾಗತಿಸಿದರು.

ಸಭೆಯಲ್ಲಿ ಚೆಪ್ಪುಡಿರ ಪ್ರತಿಮ ಕರುಂಬಯ್ಯ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ದೀನಾ ಉತ್ತಪ್ಪ, ಕಾಟಿಮಾಡ ಗಿರಿ ಅಯ್ಯಪ್ಪ, ನೆಲ್ಲಮಕ್ಕಡ ಮಾದಯ್ಯ, ಅಜ್ಜಿನಿಕಂಡ ತಿಮ್ಮಯ್ಯ, ಮಚ್ಚಾಮಾಡ ರಮೇಶ್, ರೇಶ್ಮ, ಗಣಪತಿ, ಗಂಗಮ್ಮ, ಬೊಳ್ಳಚೆಟ್ಟಿರ ಮೈನಾ ಕಾಳಪ್ಪ, ಮಂಡAಗಡ ಅಶೋಕ್, ಕೊಕ್ಕಲೇಮಾಡ ರತಿ ಕುಶಾಲಪ್ಪ, ಚಟ್ಟಂಗಡ ರಮಾ ಉತ್ತಪ್ಪ, ಗೀತಾ ವಸಂತ್, ಉಪಸ್ಥಿತರಿದ್ದರು.