ಮಡಿಕೇರಿ, ಫೆ. ೧೩: ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ ಕೊಡಗು ಜಿಲ್ಲೆಯ ಪಾಲಿಬೆಟ್ಟ ಮುಹಿಮ್ಮಾತುದ್ದೀನ್ ಅರಬಿ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಆದಿಲ್ ಬಿ.ಎ. ರಸ ಪ್ರಶ್ನೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟçಮಟ್ಟಕ್ಕೆ ಆಯ್ಕೆ ಆಗಿದ್ದಾನೆ.

ಪಾಲಿಬೆಟ್ಟದ ಲೂರ್ಡ್ಸ್ ಶಾಲೆಯ ೭ನೇ ತರಗತಿ ವಿದ್ಯಾರ್ಥಿಯಾಗಿರುವ ಆದಿಲ್, ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯು.ಕೆ. ಅಶ್ರಫ್ ಹಾಗೂ ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನಾ ದಂಪತಿ ಪುತ್ರ.