ವೀರಾಜಪೇಟೆ ಫೆ. ೧೫: ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ನೂತನ ಪಂಚಾಯಿತಿ ಕಾರ್ಯಾಲಯ ಮತ್ತು ಸಭಾಂಗಣ ನಿರ್ಮಾಣ ಮಾಡುವ ಸ್ಥಳದ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆವರಣದ ಸುತ್ತಮುತ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಸುಬ್ಬಯ್ಯ, ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ಕಟ್ಟಡ ನಿರ್ವಹಣಾ ಸಮಿತಿಯ ಕಂಜಿತAಡ ಸಂದ್ಯ ಉತ್ತಪ್ಪ, ನಾಯಡ ಸವಿನ್ ಬೋಪಣ್ಣ ಮತ್ತು ಚೆಂಗೇಟಿರ ರಾಜ ಸೋಮಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ನೇಚರ್ ಪ್ಯಾರಡೈಸ್ ಸಂಸ್ಥೆಯ ಮುಖ್ಯಸ್ಥ ಚೇತನ ಮತ್ತು ಅಪ್ಪಂಡೇರAಡ ದಿನು ಸೇರಿದಂತೆ ಇನ್ನಿತರರು ಇದ್ದರು.