ಕೂಡಿಗೆ, ಫೆ. ೧೫: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೋಮವಾರಪೇಟೆ, ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆ ಸೋಮವಾರಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಜಿಲ್ಲಾ ಕೋಳಿ ಸಾಕಾಣಿಕೆ, ಮತ್ತು ತರಬೇತಿ ಕೇಂದ್ರದಲ್ಲಿ ಹೈನುಗಾರಿಕೆ ಮತ್ತು ಕುರಿಗಳ ಸಾಕಾಣಿಕೆ ಬಗ್ಗೆ ಒಂದು ದಿನದ ತರಬೇತಿಯನ್ನು ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ರೈತರಿಗೆ ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮವಾರ ಪೇಟೆ ತಾಲೂಕು ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನಾಗರಾಜ್ ಗಿಡಕ್ಕೆ ನೀರು ಹಾಕುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ, ಹೈನುಗಾರಿಕೆಗೆ ಸಂಬAಧಿಸಿದAತೆ ರೈತರಿಗೆ ತರಬೇತಿ, ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮದ ಅಡಿಯಲ್ಲಿ ತಾಲೂಕು ವ್ಯಾಪ್ತಿಯ ರೈತರಿಗೆ ವಿವಿಧ ಹೊಸ ಹೈಬ್ರೀಡ್ ತಳಿಗಳ ಬಗ್ಗೆ ಮತ್ತು ನೂತನವಾಗಿ ಕುರಿ ಸಾಕಾಣಿಕೆ ಮಾಡುವ ಯೋಜನೆಯ ವಿಷಯಗಳ ಬಗ್ಗೆ ಇಂತಹ ಕಾರ್ಯಾಗಾರದಲ್ಲಿ ರೈತರು ಭಾಗವಹಿಸಿ ಇಲಾಖೆಯ ಮಾಹಿತಿ, ಮತ್ತು ರೋಗ ತಡೆಗಟ್ಟಲು ಅನುಸರಿಸಬಹುದಾದ ವಿಚಾರಗಳನ್ನು ತಿಳಿದುಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ಅನುಕೂಲವಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಜಿಲ್ಲಾಧ್ಯಕ್ಷ ಡಿ.ಆರ್. ಪ್ರಭಾಕರ್ ವಹಿಸಿ ಮಾತನಾಡಿ, ಸಂಘದ ಸದಸ್ಯರು ತರಬೇತಿ ಪಡೆಯುವ ಮೂಲಕ ತರಬೇತಿಯ ಪ್ರಮಾಣ ಪತ್ರದ ಮುಖೇನ ಸ್ಥಳೀಯ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯಗಳನ್ನು ಪಡೆಯಲು ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿವೆ, ಅದರ ಮೂಲಕ ಸಾಲ ಸೌಲಭ್ಯಗಳನ್ನು ಪಡೆದು ಉತ್ತಮ ದರ್ಜೆಯ ಕುರಿಗಳನ್ನು ಮತ್ತು ಹಸುಗಳನ್ನು ಖರೀದಿಸಿ, ಸಾಕಾಣಿಕೆ ಮುಖೇನ ಸ್ಥಳೀಯ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯಗಳನ್ನು ಪಡೆಯಲು ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿವೆ, ಅದರ ಮೂಲಕ ಸಾಲ ಸೌಲಭ್ಯಗಳನ್ನು ಪಡೆದು ಉತ್ತಮ ದರ್ಜೆಯ ಕುರಿಗಳನ್ನು ಮತ್ತು ಹಸುಗಳನ್ನು ಖರೀದಿಸಿ, ಸಾಕಾಣಿಕೆ ಮುಖೇನ ಸ್ಥಳೀಯ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯಗಳನ್ನು ಪಡೆಯಲು ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿವೆ, ಅದರ ಮೂಲಕ ಸಾಲ ಸೌಲಭ್ಯಗಳನ್ನು ಪಡೆದು ಉತ್ತಮ ದರ್ಜೆಯ ಕುರಿಗಳನ್ನು ಮತ್ತು ಹಸುಗಳನ್ನು ಖರೀದಿಸಿ, ಸಾಕಾಣಿಕೆ ಮಾಡಿ ಆರ್ಥಿಕವಾಗಿ ಸಬಲೀಕರಣ ಹೊಂದಲು ತರಬೇತಿಯು ಸಹಕಾರಿ ಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಬಿ.ಕೆ. ಮೋಹನ್ ಕುಮಾರ್, ಕಾರ್ಯದರ್ಶಿ ಬರಮಣ್ಣ ಬೆಟಗೇರಿ, ನಿರ್ದೇಶಕರಾದ ಶಾಂತ ಬೆಟಗೇರಿ, ಕೆ.ಎನ್ ನಟರಾಜ್, ಮಹೇಶ್, ಪಶುವೈದ್ಯ ಅಧಿಕಾರಿ ಗಳಾದ ಡಾ. ಎಸ್. ಶೈಲಜ, ಡಾ. ಪಿ.ಸಿ. ಶ್ರೀದೇವು ಸೇರಿದಂತೆ ಎರಡು ತಾಲೂಕಿನ ನೂರಾರು ರೈತರು ಭಾಗವಹಿಸಿದ್ದರು.