ಮಡಿಕೇರಿ, ಫೆ. ೧೬: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದು ಬಳಿಕ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆ. ಬಾಡಗ ಗ್ರಾಮದ ನಿವಾಸಿ, ಅರಣ್ಯ ಇಲಾಖೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀಕಾಂತ್ (೩೧) ಬಂಧಿತ ಆರೋಪಿ.

ಕುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದ ಯುವತಿಯನ್ನು ತಾ. ೨ ರಂದು ಕರೆದೊಯ್ದ ಆರೋಪಿ ಅತ್ಯಾಚಾರ ಮಾಡಿದ್ದ. ಇದರಿಂದ ಮನನೊಂದ ಯುವತಿ ತಾ. ೧೨ ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ದೂರು ನೀಡಿದ್ದರು. ಈ ಸಂಬAಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವೀರಾಜಪೇಟೆ ಡಿ.ವೈ.ಎಸ್.ಪಿ. ಮೋಹನ್ ಕುಮಾರ್, ಕುಟ್ಟ ಪಿಎಸ್‌ಐ ಸಿ. ಇರ್ಶಾದ್, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.