ನಾಪೋಕ್ಲು, ಫೆ. ೧೬: ಮೂರ್ನಾಡಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ತಾ. ೧೮ ರಂದು ಬೆಳಿಗ್ಗೆ ೧೦ ಗಂಟೆಗೆ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬಿ.ಡಿ. ಉಮೇಶ್ ವಹಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ ಬಿ.ಎಸ್., ತ್ರಿನೇತ್ರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ, ಫ್ರೆಂಡ್ಸ್ ವಾಹನ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ರಿಯಾಜ್, ನಾಪೋಕ್ಲುವಿನ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರಾಜೀವ್, ಅಮ್ಮತ್ತಿಯ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಭಿಜಿತ್, ಮೂರ್ನಾಡು ಪೊಲೀಸ್ ಉಪ ಠಾಣಾಧಿಕಾರಿ ಪಿ.ಟಿ. ಶ್ರೀನಿವಾಸ್, ಮುರ್ನಾಡು ಪೊಲೀಸ್ ಉಪಠಾಣೆ ಸಿಬ್ಬಂದಿ ರಾಜೇಂದ್ರ, ಕಾಂತೂರು ಗ್ರಾ.ಪಂ. ಸದಸ್ಯ ಹೆಚ್.ಎನ್. ರಘು, ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಗೌರವ ಅಧ್ಯಕ್ಷ ತಿಮ್ಮಪ್ಪ, ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೆ. ಚಂದ್ರ, ಕಾರ್ಯದರ್ಶಿ ಹೆಚ್.ಎಸ್. ಸತೀಶ್ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭ ಸಂಘದ ಹಿರಿಯ ಸದಸ್ಯರಿಗೆ ಸನ್ಮಾನ ಹಾಗೂ ೧೦ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.