ಕೂಡಿಗೆ, ಫೆ. ೧೬: ಕೂಡುಮಂಗ ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿ ಯುವ ನೀರಿನ ಕಾಮ ಗಾರಿಗೆ ಸಂಬAಧಿಸಿ ದಂತೆ ಪೈಪ್‌ಲೈನ್ ಅಳವ ಡಿಸಲು ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸಹಾಯಕ ಕಾರ್ಯ ಪಾಲಕ ಅಭಿಯಂತರ ವೀರೇಂದ್ರ ಕುಮಾರ್ ಮತ್ತು ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಳನ್ನು ಕಲ್ಪಿಸುವ ಪ್ರಮುಖ ವ್ಯವಸ್ಥೆಯ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ತುರ್ತಾಗಿ ಕ್ರಮ ಕೈಗೊಳ್ಳುವ ವ್ಯವಸ್ಥೆಯ ಬಗ್ಗೆ ಗಮನ ಹರಿಸಲು ಮುಂದಾಗಲು ಸ್ಥಳ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಈ ವರ್ಷ ಸರಿಯಾದ ಮಳೆ ಇಲ್ಲದ ಕಾರಣ ಅಂತರ್ಜಲ ಕುಸಿತವಾಗಿದ್ದು, ಪಂಚಾಯಿತಿ ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಈಗಲೇ ಕಷ್ಟಕರವಾಗಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ನೀರಿನ ಸಮಸ್ಯೆ ಆಗಬಹುದು.

ಹಾಗಾಗಿ ಪಂಚಾಯಿತಿ ವತಿಯಿಂದ ಮುನ್ನೆಚ್ಚರಿಕೆಯಾಗಿ ಕ್ರಮವಹಿಸಲು ಸಮಸ್ಯೆ ಇರುವ ಜಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ.

ಸಮಸ್ಯೆ ಗಂಭೀರವಾಗುವ ಮುನ್ನ ಕ್ಷೇತ್ರದ ಶಾಸಕರು ಇದರತ್ತ ಗಮನಹರಿಸಿ ಸರ್ಕಾರದ ಗಮನ ಸೆಳೆಯುವ ಮುಖಾಂತರ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯ ಮಾಡಿದ್ದಾರೆ.