ಶನಿವಾರಸಂತೆ, ಫೆ. ೧೬: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಅಮ್ಮ ಚಾರಿಟೇಬಲ್ ಸಂಸ್ಥೆ ಹಾಗೂ ಶನಿವಾರಸಂತೆ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಮತ್ತು ರೆಟಿನಾಕೇರ್ ಸೆಂಟರ್ ಸಹಯೋಗದೊಂದಿಗೆ ಉಚಿತ ನೇತ್ರ ಪರೀಕ್ಷಾ ಶಿಬಿರವನ್ನು ತಾ.೨೦ ರಂದು ಮಂಗಳವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧-೩೦ ರವರೆಗೆ ಶನಿವಾರಸಂತೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಬೆಂಗಳೂರಿನ ನುರಿತ ನೇತ್ರ ತಜ್ಞರಾದ ಡಾ. ಎಂ.ಜಿ. ರಾಮಮೂರ್ತಿ ಹಾಗೂ ಡಾ.ಸಂದೀಪ್ ತಂಡದವರು ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ನಂ.೮೧೪೭೦೧೯೪೪೮ ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.