ಕುಶಾಲನಗರ, ಫೆ.೧೭: ಕುಶಾಲನಗರ ಪಟ್ಟಣದ ಒಳಚರಂಡಿ ಯೋಜನೆಯ ಪ್ರಥಮ ಹಂತವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣ ಗೊಳಿಸಿ ಚಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ಅಂತಿಮ ಭರವಸೆ ನೀಡಿದ್ದಾರೆ.

ಕುಶಾಲನಗರ ಪುರಸಭಾ ಭಾಗದಲ್ಲಿ ಮಡಿಕೇರಿ ಉಪ ವಿಭಾಗಾಧಿಕಾರಿ ವಿನಾಯಕ ನಾರ್ವಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕಳೆದ ೧೨ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕುಶಾಲನಗರ ಒಳಚರಂಡಿ ಯೋಜನೆ ಬಗ್ಗೆ ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂದರ್ಭ ಈ ಬಗ್ಗೆ ಪ್ರತಿಕ್ರಿಯೆ ನೀಡಿದÀ ಅಧಿಕಾರಿ ಉಮೇಶ್ ಚಂದ್ರ ಈಗಾಗಲೇ ಹಾರಂಗಿ ರಸ್ತೆಯಲ್ಲಿ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಅಂತಿಮ ಹಂತದಲ್ಲಿದ್ದು,

(ಮೊದಲ ಪುಟದಿಂದ) ಉಳಿದಂತೆ ಎಲ್ಲಾ ಕಾಮಗಾರಿಗಳನ್ನು ಒಂದು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು. ಈ ಸಂಬAಧ ಕಾಮಗಾರಿಯ ಮೂಲ ಗುತ್ತಿಗೆದಾರ ಮೂಲಕ ಕಾಮಗಾರಿ ಮುಂದುವರೆದಿದೆ. ಪ್ರಥಮ ಹಂತ ಪ್ರಾಯೋಗಿಕವಾಗಿ ಮಾರ್ಚ್ ಅಂತ್ಯದ ಒಳಗೆ ಚಾಲನೆ ದೊರೆಯಲಿದೆ, ದ್ವಿತೀಯ ಹಂತ ಮೇ ತಿಂಗಳ ಅಂತ್ಯದೊಳಗಾಗಿ ಕಾಮಗಾರಿ ಪೂರ್ಣಗೊಳ್ಳುವ ಮೂಲಕ ಲೋಕಾರ್ಪಣೆಯಾಗಲಿದೆ ಎಂದು ಹೇಳಿದರು.

ಪುರಸಭೆ ಸದಸ್ಯರಾದ ಜೈ ವರ್ಧನ್, ಡಿ.ಕೆ. ತಿಮ್ಮಪ್ಪ, ವಿ.ಎಸ್. ಆನಂದ್ ಕುಮಾರ್, ಶೇಕ್ ಕಲಿಮುಲ್ಲಾ ಅವರುಗಳು ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕು. ‘ಸ್ವಚ್ಛ ಪಟ್ಟಣ ಸ್ವಚ್ಛ’ ಕಾವೇರಿ ನಿರ್ಮಾಣ ಮಾಡಲು ಇದರಿಂದ ಸಾಧ್ಯ ಎಂದರು.

ತಕ್ಷಣ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಸಾರ್ವಜನಿಕರ ಸಹಾಯದೊಂದಿಗೆ ಆಡಳಿತ ಮಂಡಳಿಯ ಸದಸ್ಯರು ಮಂಡಳಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಭರವಸೆ ನೀಡಿದಂತೆ ಮಾರ್ಚ್ ಅಂತ್ಯದೊಳಗೆ ಪ್ರಥಮ ಹಂತ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿದರು.

ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಮಾತನಾಡಿ, ಪತ್ರಿಕೆಗಳಲ್ಲಿ ಯೋಜನೆಯ ವೈಫಲ್ಯತೆ ಮತ್ತು ಅನಾಹುತಗಳ ಬಗ್ಗೆ ಆಗಾಗ್ಗೆ ವರದಿ ಬರುತ್ತಿದ್ದು, ಜನರಿಗೆ ಉತ್ತರ ನೀಡಲು ಆಗುತ್ತಿಲ್ಲ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಮಡಿಕೇರಿ ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ ಇದುವರೆಗೆ ಆಗಿರುವುದರ ಬಗ್ಗೆ ಚರ್ಚೆ ಬಿಟ್ಟು ಮುಂದಿನ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಇಲ್ಲದಿದ್ದಲ್ಲಿ ಕಾಮಗಾರಿ ಬಗ್ಗೆ ತನಿಖೆ ನಡೆಸಲು ಸಮಿತಿ ನೇಮಿಸಲಾಗುವುದು ಎಂದು ಹೇಳಿದರು.

ಶಕ್ತಿ ಪತ್ರಿಕೆಯಲ್ಲಿ ಕುಶಾಲನಗರ ಒಳಚರಂಡಿ ಯೋಜನೆ ಕಳೆದ ೧೨ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬಗ್ಗೆ ವಿಶೇಷ ವರದಿ ಪ್ರಕಟಿಸುವುದನ್ನು ಇಲ್ಲಿ ಸ್ಮರಿಸಬಹುದು.

ಸಾಮಾನ್ಯ ಸಭೆಯಲ್ಲಿ ಪುರಸಭಾ ವ್ಯಾಪ್ತಿಯಲ್ಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಬಗ್ಗೆ, ಕುಶಾಲನಗರ ಪುರಸಭೆಗೆ ಸೇರಿದ ಹಳೆ ಸಂತೆ ಮೈದಾನದಲ್ಲಿರುವ ಕುರಿ, ಕೋಳಿ, ಹಸಿಮೀನು ಮಾರಾಟ ಮಳಿಗೆಗಳ ಹರಾಜು ನಡೆಸುವ ಬಗ್ಗೆ ಚರ್ಚಿಸಲಾಯಿತು.

ಕುಶಾಲನಗರ ಪುರಸಭೆ ವ್ಯಾಪ್ತಿಗೆ ಸೇರಿದ ಗಾಂಧಿ ಬಸವನಹಳ್ಳಿ ಗ್ರಾಮದಲ್ಲಿರುವ ಕಂಡಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪ್ರಕ್ರಿಯೆ ಬಗ್ಗೆ ಸಭೆ ಚರ್ಚೆ ನಡೆಸಿತು.

ಕುಶಾಲನಗರದಲ್ಲಿ ಕಾವೇರಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಭೆಯ ಗಮನಕ್ಕೆ ತಂದ ಸದಸ್ಯರಾದ ಜೈ ವರ್ಧನ, ಆನಂದ್ ಕುಮಾರ್ ಕಾವೇರಿ ನೀರಾವರಿ ನಿಗಮದಿಂದ ಈ ಹಿಂದೆ ೨೫ ಲಕ್ಷ ವೆಚ್ಚದಲ್ಲಿ ಕಾವೇರಿ ನದಿ ಉತ್ಸವ ನಡೆಸಲಾಗಿತ್ತು. ಮುಂದಿನ ದಿನಗಳಲ್ಲಿ ಈ ಉತ್ಸವ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ಸರ್ವಾನುಮತದಿಂದ ಒಪ್ಪಿಗೆಯನ್ನು ಸಭೆ ನೀಡಿತು.

ಹಿಂದಿನ ಸಾಮಾನ್ಯ ಸಭೆಯ ನಡಾವಳಿಗಳನ್ನು ಓದಿ ಅಂಗೀಕರಿಸುವ ನಿಟ್ಟಿನಲ್ಲಿ ಸದಸ್ಯರು ಚರ್ಚಿಸಿದರು.

ಸದಸ್ಯರಾದ ಪ್ರಮೋದ್ ಮುತ್ತಪ್ಪ, ಎಂ.ಬಿ. ಸುರೇಶ ಕೆ.ಆರ್. ರೇಣುಕಾ ಮತ್ತಿತರರು ಮಾತನಾಡಿ ಸಭೆಯ ನಡಾವಳಿಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮುಖ್ಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪಟ್ಟಣದಲ್ಲಿ ಬಡಾವಣೆಗಳ ರಸ್ತೆಯಾಗಿ ಅಗಲೀಕರಣ ಗೊಂಡಿದ್ದರೂ ವಿದ್ಯುತ್ ಇಲಾಖೆ ಕಂಬಗಳನ್ನು ಇನ್ನು ಸ್ಥಳಾಂತರ ಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಧಿಕಾರಿಗಳ ಗಮನಕ್ಕೆ ತರಲಾಯಿತು. ಮಳೆಗಾಲಕ್ಕೆ ಮುನ್ನ ಈ ಕೆಲಸ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್, ಆನಂದ್, ಸದಸ್ಯರಾದ ಶೇಕ್ ಖಲೀ ಮುಲ್ಲಾ, ಪುಟ್ಟಲಕ್ಷಿö್ಮ, ಪ್ರಮೋದ್, ಜೈ ವರ್ಧನ್, ಎಂ.ಬಿ. ಸುರೇಶ್, ಆನಂದಕುಮಾರ್, ಜಯಲಕ್ಷಿö್ಮ, ಜಯ ಲಕ್ಷö್ಮಮ್ಮ, ಶೈಲ ಕೃಷ್ಣಪ್ಪ, ಸುಂದರೇಶ್ ರೇಣುಕಾ, ಬಿ.ಎಲ್. ಜಗದೀಶ್ ಮತ್ತು ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್, ಇಂಜಿನಿಯರ್ ಗಂಗಾರಾಮ್, ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.