ಶಾಸಕ ಡಾ. ಮಂಥರ್‌ಗೌಡ

ಮಡಿಕೇರಿ, ಫೆ. ೧೭: ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್‌ಗೌಡ ಹೇಳಿದ್ದಾರೆ.

‘ಶಕ್ತಿ’ಯೊಂದಿಗೆ ಅನಿಸಿಕೆ ಹಂಚಿಕೊAಡ ಅವರು, ಹೃದ್ರೋಗ ಘಟಕಕ್ಕೆ ಒತ್ತು ನೀಡಿರುವುದು ಸೇರಿದಂತೆ ಜಿಲ್ಲೆಯ ಇಬ್ಬರು ಶಾಸಕರುಗಳ ಕೋರಿಕೆಗೆ ಸ್ಪಂದಿಸಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವಾರು ಸೌಲಭ್ಯಗಳನ್ನು ಬಜೆಟ್‌ನಲ್ಲಿ ಒದಗಿಸಲಾಗಿದ್ದು, ಸಿದ್ದರಾಮಯ್ಯ ಅವರ ಸ್ಪಂದನ ಅಭಿನಂದನಾರ್ಹ ಎಂದು ಮಂಥರ್‌ಗೌಡ ಅಭಿಪ್ರಾಯಪಟ್ಟಿದ್ದಾರೆ.