ಮಡಿಕೇರಿ, ಫೆ. ೧೭: ಸ್ವಚ್ಛ ಹಾಗೂ ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನ ಜಾಗೃತಿ ಮೂಡಿಸಲು ಕರ್ನಾಟಕ ರಾಷ್ಟç ಸಮಿತಿ ಪಕ್ಷದ ವತಿಯಿಂದ ‘ಕರ್ನಾಟಕಕ್ಕಾಗಿ ನಾವು’ ಎಂಬ ಹೆಸರಿನಲ್ಲಿ ತಾ. ೧೯ರಂದು (ನಾಳೆಯಿಂದ) ರಾಜ್ಯವ್ಯಾಪಿ ಜನಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ.

ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಪ್ರಭುಸ್ವಾಮಿ ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಆರಂಭ ವಾಗಲಿರುವ ಜಾಥಾದ ನೇತೃತ್ವವನ್ನು ಪಕ್ಷದ ಅಧ್ಯಕ್ಷ ರವಿಕೃಷ್ಣರೆಡ್ಡಿ ವಹಿಸಲಿದ್ದು, ರಾಜ್ಯದ ೩೧ ಜಿಲ್ಲೆಗಳಲ್ಲಿ ಮಾರ್ಚ್ ೨ ರವರೆಗೆ ಜಾಥಾ ನಡೆಯಲಿದೆ. ತಾ. ೨೧ರಂದು ಜಾಥಾ ಕೊಡಗು ಜಿಲ್ಲೆಗೆ ಆಗಮಿಸಲಿದ್ದು, ಮಧ್ಯಾಹ್ನ ೨ ಗಂಟೆಗೆ ಮಡಿಕೇರಿಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ ೨ ರಂದು ನೆಲಮಂಗಲದಲ್ಲಿ ಜಾಥಾದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಭುಸ್ವಾಮಿ ಮಾಹಿತಿಯಿತ್ತರು.

ಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಿರೀಶ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.