ಸೋಮವಾರಪೇಟೆ, ಫೆ. ೧೬: ಮುಂಬೈನ ಜಗಜ್ಯೋತಿ ಕಲಾವೃಂದದ ವತಿಯಿಂದ ನಡೆದ ೩೭ನೇ ವಾರ್ಷಿಕ ಸಮಾರಂಭದಲ್ಲಿ ‘೨೪ನೇ ಅಖಿಲ ಭಾರತ ಮಟ್ಟದ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ೨೦೨೩ ದತ್ತಿನಿಧಿ’ ಪ್ರಶಸ್ತಿಯನ್ನು ಮಿಲನ ಕೆ. ಭರತ್ ಅವರಿಗೆ ಸೋಮವಾರಪೇಟೆ, ಫೆ. ೧೬: ಮುಂಬೈನ ಜಗಜ್ಯೋತಿ ಕಲಾವೃಂದದ ವತಿಯಿಂದ ನಡೆದ ೩೭ನೇ ವಾರ್ಷಿಕ ಸಮಾರಂಭದಲ್ಲಿ ‘೨೪ನೇ ಅಖಿಲ ಭಾರತ ಮಟ್ಟದ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ೨೦೨೩ ದತ್ತಿನಿಧಿ’ ಪ್ರಶಸ್ತಿಯನ್ನು ಮಿಲನ ಕೆ. ಭರತ್ ಅವರಿಗೆ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿ, ಕಳೆದ ೨೪ ವರ್ಷಗಳಿಂದ ಕನ್ನಡ ಮಹಿಳಾ ಬರಹಗಾರರನ್ನು ಪ್ರೋತ್ಸಾಹಿಸುವ ಸಲುವಾಗಿ ದತ್ತಿನಿಧಿ ಸ್ಥಾಪಿಸಿ ವಾರ್ಷಿಕ ಇಬ್ಬರು ಕನ್ನಡ ಬರಹಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭ ಮುಂಬೈ ಬಂಟ್ಸ್ ಸಂಘದ ಅಧ್ಯಕ್ಷ ಆನಂದ್ ಡಿ. ಶೆಟ್ಟಿ, ಉಪಾಧ್ಯಕ್ಷ ಪ್ರಭಾಕರ್ ಆರ್. ಶೆಟ್ಟಿ, ಕನ್ನಡ ಸಂಘದ ಅಧ್ಯಕ್ಷ ಜಯಂತ್ ಎನ್. ಶೆಟ್ಟಿ, ಭರತನಾಟ್ಯ ಸಂಸ್ಥೆಯ ಕಲಾವಿದೆ ಅಭಿಜ್ಞ ಪ್ರಕಾಶ್ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಇದ್ದರು.