ವೀರಾಜಪೇಟೆ, ಫೆ. ೧೬: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಹುಮಾನ ಪಡೆದ ಸಂತ ಅನ್ನಮ್ಮ ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿ ಅನಿರುದ್ ಮನೋಜ್ ಅವರನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಐಸಾಕ್ ರತ್ನಾಕರ್ ಮಾತನಾಡಿ, ವಿದ್ಯಾರ್ಥಿಯು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು, ವಿದ್ಯಾಸಂಸ್ಥೆಯ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ಪಸರಿಸಿದ್ದಾನೆ. ಗುರುಗಳು ಹಾಗೂ ಪೋಷಕರಿಗೂ ಹೆಮ್ಮೆಯ ವಿದ್ಯಾರ್ಥಿಯಾಗಿದ್ದಾನೆ ಎಂದರು. ಈ ಸಂದರ್ಭ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಸಂತ ಅನ್ನಮ್ಮ ಪ್ರೌಢಶಾಲಾ ಶಿಕ್ಷಕಿ ಹಾಗೂ ಬಹುಮಾನ ಪುರಸ್ಕöÈತ ಅನಿರುದ್‌ನ ತಾಯಿ ಕವಿತಾ ಮನೋಜ್ ಉಪಸ್ಥಿತರಿದ್ದರು.