ನಾಪೋಕ್ಲು, ಫೆ. ೧೮: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ರಸ್ತೆಯ ಬದಿಗೆ ವಾಲಿದ ಘಟನೆ ಕೋರಂಗಾಲದಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಭಾಗಮಂಡಲಕ್ಕೆ ತೆರಳುತ್ತಿದ್ದ ಕರ್ನಾಟಕ ಸರಕಾರ ರಸ್ತೆ ಸಾರಿಗೆ ರಾಜಹಂಸ ಬಸ್ಸೊಂದು ಅಯ್ಯಂಗೇರಿ ಗ್ರಾಮದ ಕೋರಂಗಲ ಶಾಲೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಬಸ್ಸಿಗೆ ಸಣ್ಣ ಪುಟ್ಟ ಹಾನಿಯಾಗಿದ್ದು ಅದೃಷ್ಟವಶಾತ್‌ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.