ಮಡಿಕೇರಿ, ಫೆ. ೧೮: ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಇತರರ ಬದುಕಿನಲ್ಲಿ ಬದಲಾವಣೆಗೆ ಕಾರಣರಾಗಬೇಕು. ಬದುಕಲೆಂದೇ ಸಂಘಟನೆಗಳಿಗೆ ಸೇರುವ ಬದಲಿಗೆ ಸಂಘಟನೆಗಳಿಗೆ ಸೇರ್ಪಡೆಯಾದ ಬಳಿಕ ಇತರರ ಬದುಕನ್ನು ಬದಲಾಯಿಸುವ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದು ರೋಟರಿ ಜಿಲ್ಲೆ ೩೧೮೧ನ ಗವರ್ನರ್ ಹೆಚ್.ಆರ್. ಕೇಶವ ಕರೆ ನೀಡಿದ್ದಾರೆ.

ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ಗೆ ಅಧಿಕೃತ ಭೇಟಿ ನೀಡಿದ ಸಂದರ್ಭ ರೋಟರಿ ಸಭಾಂಗಣದಲ್ಲಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಹೆಚ್.ಆರ್. ಕೇಶವ, ಸಮಾಜಕ್ಕೆ ನಾನಾ ರೀತಿಯ ಸೇವೆಗಳ ಮೂಲಕ ಒಳಿತನ್ನುಂಟುಮಾಡಬೇಕೆAಬ ಉದ್ದೇಶ ಹೊಂದಿರುವ ರೋಟರಿಯ ಧ್ಯೇಯಗಳೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ರೋಟರಿ ಸದಸ್ಯರಾಗಲು ಪ್ರೇರಣೆಯಾಗಿದೆ ಎಂದು ಹೇಳಿದರು. ಸಂಘಟನೆಯೇ ಜೀವನವಲ್ಲ. ಆದರೆ ಇತರರ ಜೀವನದ ಮೇಲೆ ಉತ್ತಮ ಪರಿಣಾಮ ಬೀರಲು ಸಂಘಟನೆಗಳ ಮೂಲಕ ಸಾಧ್ಯವಿದೆ. ಇದನ್ನು ರೋಟರಿ ಸಂಸ್ಥೆಯ ಸದಸ್ಯರು ನಿರೂಪಿಸಿದ್ದಾರೆ. ರೋಟರಿ ಸದಸ್ಯರು ಅಂತರರಾಷ್ಟಿçÃಯ ರೋಟರಿಗೆ ನೀಡುವ ದೇಣಿಗೆಯು ಸಾವಿರಾರು ಸಮಾಜ ಸೇವಾ ಕಾರ್ಯಗಳಿಗೆ ಸಹಕಾರಿಯಾಗುತ್ತಿದೆ. ಲಕ್ಷಾಂತರ ಜನರ ಬದುಕಿಗೆ ಈ ದೇಣಿಗೆ ಕಾರಣವಾಗುತ್ತಿದೆ. ಹೀಗಾಗಿಯೇ ೧೧೮ ವರ್ಷಗಳಿಂದ ಜಾಗತಿಕ ಮಟ್ಟದಲ್ಲಿ ರೋಟರಿ ಎಂಬ ಸಾಮಾಜಿಕ ಸೇವಾ ಸಂಸ್ಥೆಯು ಮಹತ್ತರವಾದ ಛಾಪು ಬೀರಿದೆ ಎಂದೂ ಕೇಶವ್ ಶ್ಲಾಘಿಸಿದರು.

ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ್ ರೈ, ಸಹಾಯಕ ಗವರ್ನರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್. ಎಸ್. ಸಂಪತ್ ಕುಮಾರ್, ಮುಂದಿನ ಸಾಲಿನ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ವೇದಿಕೆಯಲ್ಲಿದ್ದರು.

ಔಷಧಿ ವ್ಯಾಪಾರಿಗಳ ಸಂಘದ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಮಿಸ್ಟಿ ಹಿಲ್ಸ್ ನಿರ್ದೇಶಕ ಅಂಬೆಕಲ್ ಜೀವನ್ ಕುಶಾಲಪ್ಪ ಮತ್ತು ಕೊಡಗು ರೆಡ್ ಕ್ರಾಸ್ ಸಭಾಧ್ಯಕ್ಷ ಮಿಸ್ಟಿ ಹಿಲ್ಸ್ ನಿರ್ದೇಶಕ ಬಿ.ಕೆ. ರವೀಂದ್ರ ರೈ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಕಾಲೇಜು ವಿದ್ಯಾರ್ಥಿ ಮಿಲನ್ ಕುಮಾರ್‌ಗೆ ಮಿಸ್ಟಿ ಹಿಲ್ಸ್ ವತಿಯಿಂದ ಲ್ಯಾಪ್ ಟಾಪ್ ಕೊಡುಗೆಯಾಗಿ ನೀಡಲಾಯಿತು.

ಮಿಸ್ಟಿ ಹಿಲ್ಸ್ ನಿರ್ದೇಶಕರಾದ ಅನಿಲ್ ಎಚ್.ಟಿ., ಚೆರುಮಂಡ ಸತೀಶ್ ಸೋಮಣ್ಣ ಕಾರ್ಯಕ್ರಮ ನಿರ್ವಹಿಸಿದರು.