ಮಡಿಕೇರಿ, ಫೆ. ೧೯: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ತಾ. ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ (ಪಿಎಂಇಜಿಪಿ) ಯೋಜನೆಯಡಿ ಅರಿವು ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾಲ ಪಡೆಯುವವರಿಗೆ ಸಂಬAಧಿಸಿದAತೆ ಮಾಹಿತಿ ನೀಡಲಾಗುವುದು. ಆದ್ದರಿಂದ ಆಸಕ್ತಿಯಿರುವ ನಿರುದ್ಯೋಗ ಯುವಕ ಯುವತಿಯರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆಯವರನ್ನು ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: ೦೮೨೭೨- ೨೨೮೭೪೬ ಸಂಪರ್ಕಿಸಬಹುದಾಗಿದೆ ಎಂದು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.