ಸಿದ್ದಾಪುರ, ಫೆ. ೧೯: ನೆಲ್ಲಿಹುದಿಕೇರಿ ನೈಮ ಎಜುಕೇಶನಲ್ ಹಾಗೂ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ಸಂಘಟನೆ ವತಿಯಿಂದ ನೆಲ್ಲಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷ್ಷಾ ಪೂರ್ವ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಆಯೋಜಿಸ ಲಾಗಿತ್ತು. ಕಾರ್ಯಕ್ರಮದಲ್ಲಿ ಮೂಡಿಗೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ರಾಜ್ಯ ಶಾಸ್ತç ವಿಭಾಗದ ಮುಖ್ಯಸ್ಥರಾದ ನೌಶಾದ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಾ ತಯಾರಿ ಕುರಿತು ಮಾಹಿತಿ ನೀಡಿದರು. ಶಿಬಿರದಲ್ಲಿ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷÀ ಮುಸ್ತಫಾ ಪಿ ಕೆ, ನೈಮ ಸಂಘಟನೆಯ ಅಧ್ಯಕ್ಷÀ ಆರಿಫ್ ಎ.ಎಸ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅಫ್ಸಲ್, ಹನೀಫ್ ಇ.ಹೆಚ್. ಆಂಗ್ಲೋ ವರ್ಣಾಕುಲರ್ ಶಾಲೆಯ ಕಾರ್ಯದರ್ಶಿ ಎ.ಪಿ ಮುಹಮ್ಮದ್, ನೈಮ ಸಂಘಟನೆಯ ಸದಸ್ಯರು ಹಾಗೂ ಶಾಲೆ ಮತ್ತು ಕಾಲೇಜಿನ ಅಧ್ಯಾಪಕರು ಭಾಗವಹಿಸಿದ್ದರು. ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಅನಿಲ್ ಕುಮಾರ್ ಅವರು ಸ್ವಾಗತಿಸಿ, ವಂದಿಸಿದರು.