ವೀರಾಜಪೇಟೆ, ಫೆ. ೧೯: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಕೇರಳ ರಾಜ್ಯದ ಕಣ್ಣೂರು ಇರ್‌ಕೂರ್ ನಿವಾಸಿ ಮೊಹಮ್ಮದ್ ರಿಯಾಜ್ (೩೦) ಮತ್ತು ಇರಿಟಿ ನಿವಾಸಿ ಶಾನೀಫ್ (೨೩) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸವಾರರು ಬೈಕ್‌ನಲ್ಲಿ ಕೇರಳದಿಂದ ಜಿಲ್ಲೆಗೆ ಆಗಮಿಸಿ ಕೇರಳಕ್ಕೆ ಹಿಂದಿರುಗುವ ಸಂದರ್ಭ ಕುಶಾಲನಗರ ಮೂಲದ ವ್ಯಕ್ತಿ ಕಾರಿನಲ್ಲಿ ಕೇರಳದಿಂದ ಬರುತ್ತಿದ್ದ ಸಂದರ್ಭ ವಿರಾಜಪೇಟೆ ನಗರದ ಹೊರವಲಯದ ಆರ್ಜಿ ಮುಖ್ಯ ರಸ್ತೆ ಚರ್ಚ್ ಮುಂಭಾಗದಲ್ಲಿ ಮುಖಾಮುಖಿ ಅಪಘಾತ ಸಂಭವಿಸಿದೆ.

ಪರಿಣಾಮ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು. ದ್ವಿಚಕ್ರ ಓಡಿಸುತ್ತಿದ್ದ ಶಾನೀಫ್ ಕಾಲು ಮುರಿದಿದೆ. ಹಿಂಬದಿ ಸವಾರ ರಿಯಾಜ್ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವೀರಾಜಪೇಟೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೀರಾಜಪೇಟೆ ನಗರದ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ. - ಕಿಶೋರ್ ಕುಮಾರ್ ಶೆಟ್ಟಿ