ಮಡಿಕೇರಿ, ಫೆ. ೨೦ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಮತ್ತು ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭವು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ತಾ. ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಸ್ಕೌಟ್-ಗೈಡ್ ಭವನದಲ್ಲಿ ನಡೆಯಲಿದೆ. ಅದೇ ದಿನ ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮಕ್ಕಳ ಜಾಗೃತಿ ಜಾಥಾ ಹೊರಡಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ಬೊಳ್ಳಜ್ಜಿರ ಅಯ್ಯಪ್ಪ ತಿಳಿಸಿದ್ದಾರೆ.