ಮಡಿಕೇರಿ, ಏ. ೧: ಈಗಿನ ಕಂಪ್ಯೂಟರ್ ಯುಗದಲ್ಲಿ ಗುರು ಶಿಷ್ಯರ ಸಂಬAಧವನ್ನು ಮರೆಯುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಶಾಲೆಗಳಲ್ಲಿ ಮೊದಲು ಗುರು ಶಿಷ್ಯರ ಸಂಬAಧ ಗಟ್ಟಿಯಾಗುವಂತೆ ಮಾಡಬೇಕೆಂದು ಮಾಜಿ ಸಚಿವ ಯಂ.ಸಿ. ನಾಣಯ್ಯ ಹೇಳಿದರು. ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ೨೫ ನೇ ವರ್ಷದ ಬೆಳ್ಳಿಮಹೋತ್ಸವದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಹೆಸರು ಎಲ್ಲೆಡೆ ಅಜರಾಮರವಾಗಿರುವಂತೆ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಮಡಿಕೇರಿ ಜನರಲ್ ತಿಮ್ಮಯ್ಯ ಶಾಲೆಯು ಉತ್ತುಂಗಕ್ಕೆ ಏರಲಿ ಎಂದು ಹಾರೈಸಿದರು. ಮತ್ತೋರ್ವ ಮುಖ್ಯ ಅತಿಥಿ ಕಾಫಿ ಬೆಳೆಗಾರರು ಹಾಗೂ ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷರಾದ ನಡಿಕೇರಿಯಂಡ ಬೋಸ್ ಮಂದಣ್ಣ ಮಾತನಾಡಿ ಜನರಲ್ ತಿಮ್ಮಯ್ಯ ಅವರ ಸೇವೆಯನ್ನು ಸ್ಮರಿಸಿದರು. ಬದುಕಿನಲ್ಲಿ ಶಿಸ್ತು, ಸಂಯಮ ಹಾಗೂ ಭಾರತೀಯ ಸಂಸ್ಕೃತಿಯ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ ಶಾಲೆಯಲ್ಲಿ ಸೇವೆ ಸಲ್ಲಿಸಿದ ಹಾಗು ಸೇವೆಸಲ್ಲಿಸುತ್ತಿರುವ ಅಧ್ಯಕ್ಷರು, ಕಾರ್ಯಧ್ಯಕ್ಷರು ಕರೆಸ್ಪಾಂಡೆAಟ್, ನಿರ್ದೇಶಕರುಗಳು, ಶಾಲಾ ಮುಖ್ಯೋಪಧ್ಯಾಯರು, ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳನ್ನು ಕಾರ್ಯಕ್ರಮದ ಅಂಗವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಸ್ಮರಣ ಸಂಚಿಕೆ ಬಿಡುಗಡೆ

ಯಂ.ಸಿ.ನಾಣಯ್ಯ ಹಾಗೂ ನಡಿಕೇರಿಯಂಡ ಬೋಸ್ ಮಂದಣ್ಣ ಶಾಲೆಯ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ ಹಾಗೂ ಶಾಲಾ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಜನರಲ್ ತಿಮ್ಮಯ್ಯ ಪುತ್ಥಳಿಗೆ ಪುಪ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ನಂತರ ಶಾಲಾ ಮಕ್ಕಳು ಪ್ರಾರ್ಥಿಸಿದರು. ಶಾಲಾ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ ಸುಬ್ಬಯ್ಯ ಸ್ವಾಗತಿಸಿದರು. ಶಿಕ್ಷಕಿಯರಾದ ಸವಿತಾ, ದಿವ್ಯಾ, ಹೇಮಾವತಿ, ನಿರೂಪಿಸಿದರು. ವಿವಿಧ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷರಾದ ಕೇಕಡ ವಿಜು ದೇವಯ್ಯ, ಕರೆಸ್ಪಾಂಡೆAಟ್ ಕನ್ನಂಡ ಕವಿತಾ ಬೊಳ್ಳಪ್ಪ, ನಿರ್ದೇಶಕರಾದ ಕನ್ನಂಡ ಸಂಪತ್, ನಂದಿನೆರವAಡ ದಿನೇಶ್, ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವAಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಮಂಡಿರ ಸದಾಮುದ್ದಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಕಾಂಡೇರ ಲಲ್ಲು ಕುಟ್ಟಪ್ಪ, ಆಡಳಿತಾಧಿಕಾರಿಗಳಾದ ಮುಕ್ಕಾಟಿರ ಪೊನ್ನಮ್ಮ, ಚೌರೀರ ಕಾವೇರಿ ಪೂವಯ್ಯ, ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ವೇದಿಕೆಯಲ್ಲಿದ್ದರು. ವಿದ್ಯಾರ್ಥಿ ಸಿಂಚನ ವಂದಿಸಿದರು.