ವೀರಾಜಪೇಟೆ, ಏ. ೧: ಸಮೀಪದ ಹೆಗ್ಗಳ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿಗಳು, ಸ್ವೆಟರ್, ಜಾಮಿಟ್ರಿ ಬಾಕ್ಸ್, ನೀರಿನ ಬಾಟಲ್ ಮುಂತಾದ ಸಾಮಗ್ರಿಗಳನ್ನು ವಿತರಿಸಿ ದರು. ಅಂತಿಮ ಪದವಿ ಬಿಬಿಎ ವಿದ್ಯಾರ್ಥಿ ಗಳಾದ ಕಾವೇರಪ್ಪ ಹಾಗೂ ಐಶ್ವರ್ಯ ಮಕ್ಕಳಿಗೆ ಆರೋಗ್ಯ ಜಾಗೃತಿ ಮತ್ತು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿ ಶಾಹಿದ್ ಆಲಿ ಹಾಡನ್ನು ಹಾಡಿ ಮಕ್ಕಳನ್ನು ರಂಜಿಸಿದರು.

ಇದೇ ಸಂದರ್ಭ ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸೆಂಟ್ ಆನ್ಸ್ ಪದವಿ ಕಾಲೇಜಿನ ಬಿಬಿಎ ವಿಭಾಗದ ಮುಖ್ಯಸ್ಥೆ ಹೇಮ ಬಿ.ಡಿ. ಹಾಗೂ ಪ್ರಾಧ್ಯಾಪಕಿ ನಿರ್ಮಲ ಎಂ.ಟಿ. ಅವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿಯರಾದ ಶಿಲ್ಪಾ ಹಾಗೂ ಟಿನ್ಸಿ ಪಾಲ್ಗೊಂಡಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಮ್ಮ, ಎಸ್.ಡಿ. ಎಂ.ಸಿ ಅಧ್ಯಕ್ಷರು, ಸದಸ್ಯರುಗಳು ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.