ನಾಪೋಕ್ಲು, ಏ. ೨: ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ೧೧೮ನೇ ಜನ್ಮದಿನದ ಅಂಗವಾಗಿ ಕುಂಡ್ಯೋಳAಡ ಕಪ್ ಹಾಕಿ ಕ್ರೀಡಾ ಸಮಿತಿ ವತಿಯಿಂದ ನಮನ ಸಲ್ಲಿಸಿ ಗೌರವಿಸಲಾಯಿತು.

ಕುಟುಂಬದ ಪಟ್ಟೆದಾರ ಕುಂಡ್ಯೋಳAಡ ನಾಣಯ್ಯ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಕ್ರೀಡಾ ಉತ್ಸವದ ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ, ಕಾರ್ಯದರ್ಶಿ ವಿಶು ಪೂವಯ್ಯ, ಕ್ರೀಡಾ ಸಮಿತಿ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು ಸಿಹಿ ಹಂಚಿದರು.