ಸುAಟಿಕೊಪ್ಪ, ಮೇ ೫: ಅತ್ತೂರು-ನಲ್ಲೂರು ಗ್ರಾಮದ ಮತ್ತಿಕಾಡುವಿನಲ್ಲಿರುವ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ವಾರ್ಷಿಕ ಪೂಜಾ ಕಾರ್ಯಗಳು ಸಂಪನ್ನಗೊAಡವು. ಏಪ್ರಿಲ್ ೩೦ ರಂದು ಬೆಳಿಗ್ಗೆಯಿಂದ ಪ್ರಾರ್ಥನೆ ಪುಣ್ಯಾಹ, ಕಲಶ, ಗಣಪತಿ ಹೋಮ, ದುರ್ಗಾ ಹೋಮ, ಮಹಾಕಲಶಾಭಿಷೇಕ, ಮಹಾಪೂಜೆ, ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ದಿನದ ಅಂಗವಾಗಿ ದೇವಾಲಯವನ್ನು ವಿವಿಧ ಬಗೆಯ ಹೂವಿನಿಂದ ಅಲಂಕರಿಸಲಾಗಿತ್ತು. ಅತ್ತೂರು-ನಲ್ಲೂರು ಗ್ರಾಮದ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯದ ಮುಖ್ಯ ಅರ್ಚಕ ಮಂಜುನಾಥ ಭಟ್, ಯೋಗೀಶ್ ಭಟ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಸಲಾಯಿತು.