ಕೂಡಿಗೆ, ಮೇ ೭: ಕುಶಾಲನಗರ ತಾಲೂಕು ತಹಶೀಲ್ದಾರ್ ನೇತೃತ್ವದ ಟಾಸ್ಕ್ಫೋರ್ಸ್ ಸಮಿತಿಯ ವತಿಯಿಂದ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಆಧ್ಯತೆಯ ಅಧಾರದ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮಕ್ಕೆ ಕಂದಾಯ ಇಲಾಖೆಯ ಟಾಸ್ಕ್ಫೋರ್ಸ್ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.

ಈಗಾಗಲೇ ಅನೇಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತದಿಂದಾಗಿ ಕೊಳವೆ ಬಾವಿಗಳಿಂದ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವತಿಯಿಂದ ಟ್ಯಾಂಕರ್ ಮೂಲಕ ಆಯಾ ಗ್ರಾಮಗಳಿಗೆ ಕುಡಿಯುವ ನೀರನ್ನು ವಿತರಣೆ ಮಾಡಲಾಗುತ್ತಿದೆ.

ಮಾದಾಪಟ್ಟಣ ಗ್ರಾಮಕ್ಕೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಕ ಸಂತೋಷ್ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿದರು.

-ಕೆ.ಕೆ. ನಾಗರಾಜಶೆಟ್ಟಿ.