ಮಡಿಕೇರಿ, ಮೇ ೮: ಸಿದ್ದಾಪುರ ವ್ಯಾಪ್ತಿಯ ೨೪೦೦ ಎಕರೆ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಭೂಪರಿವರ್ತನೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ. ೧೦ ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶುಕ್ರವಾರ ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೩೦ ರವರೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ರಾಷ್ಟçಪತಿ, ಪ್ರಧಾನಮಂತ್ರಿ, ಕೇಂದ್ರ ಪರಿಸರ ಮತ್ತು ಅರಣ್ಯ ಮಂತ್ರಾಲಯ, ಯುನೆಸ್ಕೋದ ಮಹಾನಿರ್ದೇಶಕರು, ದೆಹಲಿಯ ಜಲ ನಿರ್ವಹಣಾ ಪ್ರಾಧಿಕಾರ, ಕರ್ನಾಟಕದ ಕಾವೇರಿ ನೀರಾವರಿ ನಿಯಂತ್ರಣ ಸಮಿತಿ, ಅರ್ಥಶಾಸ್ತçಜ್ಞ ಡಾ. ಸುಬ್ರಮಣ್ಯನ್ ಸ್ವಾಮಿ ಹಾಗೂ ಸಂಬAಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಗುವುದು ಎಂದು ನಾಚಪ್ಪ ತಿಳಿಸಿದ್ದಾರೆ.