ಕುಶಾಲನಗರ, ಮೇ ೮: ಕಳೆದ ಕೆಲವು ದಿನಗಳಿಂದ ಕುಶಾಲನಗರ ಸರಕಾರಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥ ಗೊಂಡ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದು ಕುಶಾಲ ನಗರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರೂ ಪ್ರಯೋಜನವಾಗದೆ ಮೃತಪಟ್ಟಿರುವುದಾಗಿ ಕುಶಾಲನಗರ ಟೌನ್ ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿ ಕುಶಾಲನಗರದಲ್ಲಿ ಕಳೆದ ನಾಲ್ಕು ದಶಕಗಳಿಂದ ಓಡಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇವರÀ ವಾರಿಸುದಾರರು ಯಾರಾದರೂ ಇದ್ದಲ್ಲಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ಸಂಖ್ಯೆ ೦೮೨೭೬ ೨೭೪೩೩೩ ಅಥವಾ ಮೊಬೈಲ್ ಸಂಖ್ಯೆ ೯೪೮೦೮೦೪೯೫೧ ಸಂಪರ್ಕಿಸುವAತೆ ಪೊಲೀಸರು ಕೋರಿದ್ದಾರೆ.