ಕೂಡಿಗೆ, ಮೇ ೧೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದ ಶಿವಕುಮಾರ್ ಎಂಬವರ ಮನೆಯ ಗೋಡೆ ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಕುಸಿತಗೊಂಡಿದೆ. ಸ್ಥಳಕ್ಕೆ ಕೂಡಿಗೆ ವಿಭಾಗದ ಕಂದಾಯ ಇಲಾಖೆಯ ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.