ಮಡಿಕೇರಿ, ಮೇ ೯: ಬೆಂಗಳೂರಿನ ಕನ್ನಡ ಸಂಘರ್ಷ ಸಮಿತಿ ವತಿಯಿಂದ ಡಾ. ಅನುಪಮಾ ನಿರಂಜನ ಅವರ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ರಾಜ್ಯಮಟ್ಟದ ಮಹಿಳಾ ಕಥಾಸ್ಪರ್ಧೆಯಲ್ಲಿ ಜಿಲ್ಲೆಯ ಲೇಖಕಿ ರಾಧಿಕಾ ವಿಶ್ವನಾಥ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ರಾಧಿಕಾ ಅವರ ಮೀರಾ ಕಥೆಗೆ ಬಹುಮಾನ ಸಿಕ್ಕಿದ್ದು, ತಾ.೧೭ರಂದು ಬೆಂಗಳೂರಿನ ಎನ್.ಆರ್. ಕಾಲೋನಿಯಲ್ಲಿ ಬಿ.ಎಂ.ಶ್ರೀ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷ ಎ.ಎಸ್. ನಾಗರಾಜಸ್ವಾಮಿ ತಿಳಿಸಿದ್ದಾರೆ.