ಶ್ರೀಮಂಗಲ, ಮೇ ೧೦: ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಚಿ, ಬೀರುಗ, ಕಾಕೂರು ಹಾಗೂ ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ತಾ. ೧೧(ಇಂದು) ಮತ್ತು ೧೨ ರಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೬ ಗಂಟೆವರೆಗೆ ಹಮ್ಮಿಕೊಂಡಿದೆ.

ಗ್ರಾಮಸ್ಥರು, ಕಾರ್ಮಿಕರು ಹಾಗೂ ಬೆಳೆಗಾರರು ತೋಟದ ಕೆಲಸವನ್ನು ಸ್ಥಗಿತಗೊಳಿಸಿ ಶಾಲಾ-ಕಾಲೇಜು ಮಕ್ಕಳ ಬಗ್ಗೆಯೂ ಪೋಷಕರು ಎಚ್ಚರ ವಹಿಸಿ ಸಹಕಾರ ನೀಡುವಂತೆ ಶ್ರೀಮಂಗಲ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿಗಳಾದ ಅರವಿಂದ ಎಸ್. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.