ನಾಪೋಕ್ಲು, ಮೇ ೧೦: ವ್ಯಕ್ತಿಯೋರ್ವನ ಮೃತದೇಹ ಮಸೀದಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದ ಬೈರಂಡಾಣೆ ನಿವಾಸಿ ಬಿ.ಯು. ಶಾದುಲಿ (೫೫) ಮೃತ ದುರ್ದೈವಿ.

ಪಡಿಯಾಣಿ ಬೈರಂಡಾಣೆ ಮಸೀದಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶಾದುಲಿ ಮೃತದೇಹ ಪತ್ತೆಯಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಶಾದುಲಿ ಕೆಲವು ದಿನಗಳಿಂದ ಅರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಶುಕ್ರವಾರ ಬೆಳಿಗ್ಗೆ ಮನೆಯಿಂದ ತೆರಳಿ ಮಸೀದಿಗೆ ಬಂದಿದ್ದ ಶಾದುಲಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಮಹಜರು ಮಾಡಿ ಪ್ರಕರಣವನ್ನು ದಾಖಲಿಸಿಕೊಂಡು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.