ವೀರಾಜಪೇಟೆ, ಮೇ ೧೦: ವೀರಾಜಪೇಟೆಯಿಂದ ಗೋಣಿಕೊಪ್ಪ ಕಡೆ ಹೋಗುವ ರಸ್ತೆ ಬದಿಗಳಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ನಡೆಸಲಾಯಿತು. ಕಳೆದ ಒಂದು ತಿಂಗಳಿನಿAದ ಪಂಜರಪೇಟೆಯಿAದ ಕಾವೇರಿ ಕಾಲೇಜುವರೆಗೆ ರಸ್ತೆಯ ಎರಡು ಬದಿಗಳಲ್ಲಿ ಚರಂಡಿ ಹಾಗೂ ಸ್ಲಾಬ್ ಹಾಕುವ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಬದಿಗಳಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅನುಮತಿ ದೊರಕಿದ ಹಿನ್ನೆಲೆ ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ, ಸೆೆಸ್ಕ್ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯವನ್ನು ನಡೆಸಿದರು.