ಸಿದ್ದಾಪುರ, ಮೇ ೧೨: ಚೆನ್ನಂಗಿ ಸುತ್ತಮುತ್ತ ವ್ಯಾಪ್ತಿಯಲ್ಲಿ ಬಾರಿ ಗಾಳಿ ಮಳೆಗೆ ಮನೆಯೊಂದರ ಮೇಲ್ಚಾವಣಿ ಹಾರಿ ಹೋಗಿ ಮನೆಯಲ್ಲಿದ್ದವರು ಪ್ರಾಣಾ ಪಾಯದಿಂದ ಪಾರಾದ ಘಟನೆ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ ಚಿಕ್ಕ ರೇಷ್ಮೆ ಹಾಡಿಯಲ್ಲಿ ನಡೆದಿದೆ.

ಹಾಡಿಯ ನಿವಾಸಿ ಮಂಜುನಾಥ್ ಎಂಬವರು ಪತ್ನಿ ಮಕ್ಕಳೊಂದಿಗೆ ರಾತ್ರಿ ನಿದ್ರೆಯಲ್ಲಿದ್ದ ಸಂದರ್ಭ ಜೋರಾಗಿ ಗಾಳಿಯೊಂದಿಗೆ ಮಳೆ ಸುರಿಯಲಾರಂಭಿಸಿದೆ

ಕೆಲವೇ ನಿಮಿಷಗಳಲ್ಲಿ ಗಾಳಿಗೆ ಹಾರಿ ಶೀಟುಗಳು ಮುರಿದು ಬಿದ್ದಿವೆ. ಮನೆಯಲ್ಲಿದ್ದವರು ಮನೆಯಿಂದ ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂದಾಜು ಮೂರು ಲಕ್ಷದಷ್ಟು ನಷ್ಟ ಉಂಟಾಗಿದೆ.

ಮಳೆ ಹಾನಿ ಪರಿಹಾರದಲ್ಲಿ ಪರಿಹಾರ ನೀಡುವುದರ ಮೂಲಕ ಮನೆ ದುರಸ್ತಿ ಪಡಿಸಿ ಕೊಡಬೇಕೆಂದು ಆದಿವಾಸಿ ಮುಖಂಡ ಸಿದ್ದಪ್ಪ ಒತ್ತಾಯಿಸಿದ್ದಾರೆ.