ಮಡಿಕೇರಿ, ಮೇ ೧೬ : ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಚೇಂಬರ್ ಆಫ್ ಕಾಮರ್ಸ್) ನೂತನ ಅಧ್ಯಕ್ಷರಾಗಿ ಬಿ.ಆರ್. ನಾಗೇಂದ್ರ ಪ್ರಸಾದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೋಂತಿ ಗಣೇಶ್ ಆಯ್ಕೆಯಾಗಿದ್ದಾರೆ.

ಕೋಶಾಧಿಕಾರಿಯಾಗಿ ಪೊನ್ನಿಮಾಡ ಎಸ್.ಸುರೇಶ್, ಉಪಾಧ್ಯಕ್ಷರುಗಳಾಗಿ ನವೀನ್ ಅಂಬೆಕಲ್, ಎ.ಎನ್.ರವಿ ಉತ್ತಪ್ಪ ಸುನಿಲ್ ಮಾದಪ್ಪ ಕೆ.ಕೆ, ಬಿ.ಟಿ.ತಿಮ್ಮ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಗಳಾಗಿ ಬಿ.ಅರ್.ಪ್ರಮೋದ್, ಟಿ.ಅರ್.ಶರವಣ ಕುಮಾರ್, ಪ್ರಭಾಕರ ನೆಲ್ಲಿತ್ತಾಯ, ಶ್ರೀನಿವಾಸ ಕೆ.ಕೆ ಹಾಗೂ ಮಹೇಶ್ ಪೈ ಎನ್.ಎಂ ಅವರುಗಳು ನೇಮಕಗೊಂಡರು.

ನಗರದ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಬಿ. ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಬಿ.ಆರ್.ನಾಗೇಂದ್ರ ಪ್ರಸಾದ್, ವಾಣಿಜ್ಯೋದ್ಯಮಿಗಳು, ವರ್ತಕರು ಹಾಗೂ ಗ್ರಾಹಕರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ. ಕೊಡಗು ಜಿಲ್ಲೆಯ ಹಿತದೃಷ್ಟಿಯಿಂದ ನಾವೆಲ್ಲರೂ ಒಗ್ಗಟ್ಟಿನಿಂದ

(ಮೊದಲ ಪುಟದಿಂದ) ಕಾರ್ಯನಿರ್ವಹಿಸಲಿದ್ದೇವೆ. ವರ್ತಕರು ಎದುರಿಸುತ್ತಿರುವ ಸಮಸ್ಯೆಯನ್ನು ಸರಕಾರದ ಮಟ್ಟದಲ್ಲಿ ಗಮನ ಸೆಳೆದು ಪರಿಹರಿಸುವ ಪ್ರಯತ್ನ ಜೊತೆಗೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಸಾಧಿಸುತ್ತಿರುವ ಹಿನ್ನೆಲೆ ಈ ನಿಟ್ಟಿನಲ್ಲಿ ಒತ್ತು ನೀಡಲಾಗುವುದು ಎಂದು ಹೇಳಿದರು. ನಾಗೇಂದ್ರ ಪ್ರಸಾದ್ ಪ್ರಸ್ತುತ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ, ಆರ್ಯವೈಶ್ಯ ಮಹಾಸಭಾ ಜಿಲ್ಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.