ಹೆಚ್.ಆರ್. ಕೇಶವ್

ಸೋಮವಾರಪೇಟೆ, ಮೇ ೧೬: ರೋಟರಿ ಸಂಸ್ಥೆಯಿAದ ಸ್ಥಳೀಯ ಜನರ ಸಮಸ್ಯೆಗಳ ಪರಿಹಾರಕ್ಕೆ ಶಾಶ್ವತ ಯೋಜನೆಗಳನ್ನು ಹಮ್ಮಿಕೊಂಡಲ್ಲಿ ಮಾತ್ರ ಅವುಗಳ ಪ್ರಯೋಜನ ಜನರಿಗೆ ಸಿಗಲಿದೆ ಎಂದು ಜಿಲ್ಲಾ ಗವರ್ನರ್ ಹೆಚ್.ಆರ್. ಕೇಶವ್ ಉಪಸ್ಥಿತರಿದ್ದರು.

ಇಲ್ಲಿನ ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ಗೆ ಅಧಿಕೃತ ಭೇಟಿ ಕಾರ್ಯಕ್ರಮದ ಪ್ರಯುಕ್ತ, ಕರ್ಕಳ್ಳಿ ರಸ್ತೆಯ ರೋಟರಿ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಪಂಚದಲ್ಲಿನ ಸೇವಾ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿರುವ ರೋಟರಿ ವರ್ಷಂಪ್ರತಿ ಹತ್ತು ಹಲವು ಸೇವೆಗಳನ್ನು ಮಾಡಿಕೊಂಡು ಬರುತ್ತಿದೆ. ಮತ್ತೊಬ್ಬರ ಮೇಲೆ ದೂರು ನೀಡದೆ, ಮೊದಲು ನಾವೇ ಮುಂದೆ ನಿಂತು ಕೆಲಸ ಮಾಡಿದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಸಂಸ್ಥೆಯ ಮೂಲಕ ಕಾಲಕ್ಕೆ ತಕ್ಕ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ, ಅದನ್ನು ಯಶಸ್ವಿ ಗೊಳಿಸಲು ಎಲ್ಲರೂ ಮುಂದಾಗ ಬೇಕೆಂದರು. ಸಹಾಯಕ ರಾಜ್ಯಪಾಲ ಎಂ.ಡಿ. ಲಿಖಿತ್ ಮಾತನಾಡಿ, ರೋಟರಿ ಸಂಸ್ಥೆಯಿAದ ಸಮಾಜದಲ್ಲಿ ಮಾಡುತ್ತಿರುವ ಸಾಮಾಜಿಕ ಸೇವಾ ಕಾರ್ಯದ ಪ್ರಯೋಜನಗಳು ಒಂದಿಲ್ಲೊAದು ರೀತಿಯಲ್ಲಿ ನಮಗೂ ಸಿಗುತ್ತಿದೆ. ದೀರ್ಘಾವಧಿಯವರೆಗೆ ಜನರ ಸೇವೆಗೆ ದೊರಕುವಂತಹ ಹಲವು ಯೋಜನೆಗಳನ್ನು ಮಾಡಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ವಸಂತ್ ನಂಗಾರು ವಹಿಸಿದ್ದರು. ಈ ಸಂದರ್ಭ ಕಾರ್ಯದರ್ಶಿ ಚೇತನ್ ಚಂದ್ರಾಜು, ವಲಯ ಸೇನಾನಿ ಉಲ್ಲಾಸ್ ಕೃಷ್ಣ, ಜೆ.ಕೆ. ಪೊನ್ನಪ್ಪ, ಕೆ.ಡಿ. ಬಿದ್ದಪ್ಪ ಉಪಸ್ಥಿತರಿದ್ದರು.