ಕಣಿವೆ, ಮೇ ೧೬ : ಬುಧವಾರ ರಾತ್ರಿ ಸುರಿದ ಮಳೆಗೆ ಮಾದಾಪಟ್ಟಣ ಗ್ರಾಮದ ನಿವಾಸಿ ಪರ್ವಿನ್ ತಾಜ್ ಎಂಬವರಿಗೆ ಸೇರಿದ ಮನೆಗೆ ಹಾನಿಯಾಗಿದ್ದು ಕುಶಾಲನಗರದ ಕಂದಾಯ ಅಧಿಕಾರಿ ಸಂತೋಷ್ ಕುಮಾರ್ ಹಾಗೂ ಗ್ರಾಮ ಲೆಕ್ಕಿಗ ಗೌತಮ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.