ಮಡಿಕೇರಿ, ಮೇ ೧೭ : ಕರ್ನಾಟಕ ಲೋಕಾಯುಕ್ತ ಮಡಿಕೇರಿ ಡಿವೈಎಸ್‌ಪಿ ಪವನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದು-ಕೊರತೆ ಸಭೆ ಶುಕ್ರವಾರ ನಡೆಯಿತು.

ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ಲೋಕಾಯುಕ್ತ ಡಿವೈಎಸ್‌ಪಿ ಅವರ ಮುಂದೆ ಮಂಡಿಸಿದರು.

ಜಾತಿ, ಆದಾಯ ಸೇರಿದಂತೆ ವಿವಿಧ ಪ್ರಮಾಣ ಪತ್ರ ಪಡೆಯಲು ಹರಸಾಹಸ ಪಡಬೇಕಿದೆ ಎಂದು ಸಾರ್ವಜನಿಕರೊಬ್ಬರು ದೂರಿದರು.

ಸಕಾಲದಲ್ಲಿ ಇಷ್ಟು ದಿನದೊಳಗೆ ಪ್ರಮಾಣ ಪತ್ರ ನೀಡಬೇಕು ಎಂಬ ಆದೇಶ ಇದ್ದರೂ ಸಹ ಸತಾಯಿಸುತ್ತಿದ್ದಾರೆ. ಜಾತಿ, ಆದಾಯ ಮತ್ತಿತರ ಪ್ರಮಾಣ ಪತ್ರ ಪಡೆಯಲು ಅಗತ್ಯ ದಾಖಲಾತಿಯ ಮಾಹಿತಿ ಫಲಕವನ್ನು ಅಳವಡಿಸಿದ್ದಲ್ಲಿ ಒದಗಿಸಲಾಗುವುದು, ಆದರೆ ಸತಾಯಿಸುವುದು ಏಕೆ? ಎಂದು ಸಾರ್ವಜನಿಕರೊಬ್ಬರು ಅವಲತ್ತುಕೊಂಡರು.

ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ಯಾರು ಸತಾಯಿಸುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಲೋಕಾಯುಕ್ತ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದೊಂದು ಗಂಭೀರ ವಿಚಾರವಾಗಿದ್ದು, ಯಾರನ್ನು ಸಹ ಸತಾಯಿಸದೆ ಗೌರವದಿಂದ ಕಾಣಬೇಕು. ಪ್ರಮಾಣ ಪತ್ರ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಇದ್ದಲ್ಲಿ, ಹಿಂಬರಹವನ್ನಾದರೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಾಗದ ಖಾತೆಗೆ ಸಂಬAಧಿಸಿದAತೆ ಸುಮಾರು ನಾಲ್ಕು ದಶಕಗಳಿಂದ ಓಡಾಡಿದರೂ ಸಹ ಖಾತೆ ಬದಲಾವಣೆ ಆಗಿಲ್ಲ. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರೊಬ್ಬರು ಮನವಿ ಮಾಡಿದರು.

ಖಾತೆ ಬದಲಾವಣೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ನಾಲ್ಕು ದಶಕವಾದರೂ ಸಹ ಖಾತೆ ಸರಿಪಡಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಲೋಕಾಯುಕ್ತ ಡಿವೈಎಸ್‌ಪಿ ಅವರು ಕೆಲವು ಇಲಾಖೆಗಳಲ್ಲಿ ಇದ್ದಕ್ಕಿದ್ದ ಹಾಗೆ ಕಡತಗಳು ನಾಪತ್ತೆಯಾಗುತ್ತವೆ ಹೇಗೆ? ಎಂದು ಪ್ರಶ್ನಿಸಿದರು.

ಪಡಿತರ ಚೀಟಿ ಕೊಡಿಸುವಂತೆ ಲೋಕಾಯುಕ್ತ ಡಿವೈಎಸ್‌ಪಿ ಅವರಲ್ಲಿ ಸಾರ್ವಜನಿಕರೊಬ್ಬರು ಮನವಿ ಮಾಡಿದರು. ವಿವಿಧ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಸಾರ್ವಜನಿಕರಿಗೆ ನೇರವಾಗಿ ಕೆಲಸಗಳು ಆಗುವಂತಾಗಬೇಕು. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವAತಾಗಬೇಕು ಎಂದರು. ಈ ಕುರಿತು ಪ್ರತಿಕ್ರಿಯಿಸಿದ ಪವನ್ ಅವರು, ಸಾರ್ವಜನಿಕರನ್ನು ಗೌರವಯುತವಾಗಿ ಮಾತನಾಡಿಸಿದಲ್ಲಿ ಅರ್ಧ ಕೆಲಸಗಳು ಬಗೆಹರಿಯುತ್ತವೆ. ನಂತರ ಅವರ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಬಹುದು ಎಂದರು.

ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ದೂರುಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆ, ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಪ್ರಯತ್ನಿಸುತ್ತಿರುವುದು ಕಂಡುಬAದಿದೆ.

ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ ಅಧಿಕಾರಿಗಳ ಮಕ್ಕಳು ಸಮಾಜದಲ್ಲಿ ಒಳ್ಳೆಯವರಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಇದನ್ನು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಬೇಕು ಎಂದರು. ತಹಶೀಲ್ದಾರ್ ರಮೇಶ್ ಬಾಬು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.