ವೀರಾಜಪೇಟೆ, ಮೇ ೧೮: ಬಿಟ್ಟಂಗಾಲದಿAದ ಬಾಳುಗೋಡು ಮಾರ್ಗವಾಗಿ ಪೆರುಂಬಾಡಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಸಣ್ಣ ಸೇತುವೆ ನಿರ್ಮಾಣ ಕಾರ್ಯ ಅರ್ಧದಲ್ಲಿ ಸ್ಥಗಿತಗೊಂಡ ಪರಿಣಾಮ ಮುಖ್ಯರಸ್ತೆಯಲ್ಲಿ ಗುಂಡಿಬಿದ್ದು ಅಪಘಾತಕ್ಕೆ ಎಡೆ ಮಾಡಿಕೊಡಬಹುದು ಎಂದು ಸ್ಥಳೀಯರು ಗುಂಡಿ ಬಿದ್ದ ಸ್ಥಳದಲ್ಲಿ ಬಾಳೆಗಿಡ ನೆಟ್ಟು ವಾಹನ ಸವಾರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

ಕೆಲವೇ ದಿನದಲ್ಲಿ ಕೊಡಗಿನಲ್ಲಿ ಮುಂಗಾರು ಆರಂಭಗೊಳ್ಳಲಿದ್ದು ಕಾಮಗಾರಿ ಪೂರ್ಣಗೊಳ್ಳದಿದ್ದರೆ ಸಾರ್ವಜನಿಕರಿಗೆ ಸಮಸ್ಯೆಯಾಗಲಿದೆ. ಕೂಡಲೇ ಸಂಬAಧಿಸಿದವರು ಮತ್ತು ಕ್ಷೇತ್ರದ ಶಾಸಕರು ಈ ಬಗ್ಗೆ ಗಮನಹರಿಸಿ ಸರಿಪಡಿಸಿಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.