ಸಿದ್ದಾಪುರ, ಮೇ ೧೭: ಕಾಫಿ ತೋಟದಲ್ಲಿ ಹಾಡಹಗಲೇ ೧೮ ಕಾಡಾನೆಗಳು ಬೀಡುಬಿಟ್ಟು ದಾಂಧಲೆ ನಡೆಸಿದ್ದು, ಕಾರ್ಮಿಕರು ಜೀವ ಭಯದಿಂದ ಕೆಲಸ ಸ್ಥಗಿತಗೊಳಿಸಿ ತೆರಳಿದ ಘಟನೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಕಾಫಿ ತೋಟದಲ್ಲಿ ನಡೆದಿದೆ.

ನೆಲ್ಯಹುದಿಕೇರಿಯ ಮೇರಿ ಲ್ಯಾಂಡ್ ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ತೆರಳದೇ ಗೈರಾಗಿದ್ದಾರೆ. ಕಾಡಾನೆ ಹಾವಳಿಯಿಂದ ಕೆಲಸಕ್ಕೆ ಕಾರ್ಮಿಕರಿಲ್ಲದೇ ಕೆಲಸಗಳು ಸ್ಥಗಿತಗೊಂಡಿವೆ.