ನಾಪೋಕ್ಲು, ಮೇ ೧೭: ನಾಪೋಕ್ಲು ಹೋಬಳಿ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದ ಬೊಟ್ಟೋಳಂಡ ಬಿ. ಅಪ್ಪಣ್ಣ ಅವರ ಮನೆಯ ತಡೆಗೋಡೆ ಮಳೆಯಿಂದಾಗಿ ಕುಸಿದು ನಷ್ಟ ಸಂಭವಿಸಿದೆ. ಗುರುವಾರ ರಾತ್ರಿ ಮೂರು ಕಾಲು ಇಂಚು ಬಾರಿ ಮಳೆಯಾಗಿದೆ.

ಅಪ್ಪಣ್ಣನವರು ಕೆಲವು ಸಮಯಗಳ ಹಿಂದೆ ಮನೆಗೆ ತಡೆಗೋಡೆ ನಿರ್ಮಿಸಿದ್ದರು. ನಾಪೋಕ್ಲು ವ್ಯಾಪ್ತಿಯಲ್ಲಿ ಕಳೆದ ನಾಲ್ಕೆöÊದು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಶುಕ್ರವಾರ ಮಧ್ಯಾಹ್ನವೂ ಮಳೆಯಾಗಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.